<p><strong>ಬೆಂಗಳೂರು:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ ಮೂರೂ ವರ್ಷಗಳಲ್ಲಿ ಜನರನ್ನು ವಂಚಿಸುವ ಕೆಲಸವನ್ನಷ್ಟೇ ಮಾಡಿದೆ’ ಎಂದು ನಿತಿನ್ ನವೀನ್ ಆರೋಪಿಸಿದರು.</p>.<p>ಪಕ್ಷದ ಪ್ರಮುಖರ ಸಮಿತಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ತನ್ನ ಒಳಜಗಳದ ಕಾರಣಕ್ಕೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದೆ. ಜನಹಿತಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ’ ಎಂದು ಟೀಕಿಸಿದರು.</p>.<p>‘ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಯಕರು, ಈಗ ತಾವೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಮಗಾಗಿ ಸರ್ಕಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮೂಲೆಗೆ ತಳ್ಳಿದ್ದಾರೆ. ದೆಹಲಿಯ ಕಾಂಗ್ರೆಸ್ ತಂಡಕ್ಕೆ ಕರ್ನಾಟಕವು ಎಟಿಎಂ ಆಗಿದೆ’ ಎಂದು ಆಪಾದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-36714794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ ಮೂರೂ ವರ್ಷಗಳಲ್ಲಿ ಜನರನ್ನು ವಂಚಿಸುವ ಕೆಲಸವನ್ನಷ್ಟೇ ಮಾಡಿದೆ’ ಎಂದು ನಿತಿನ್ ನವೀನ್ ಆರೋಪಿಸಿದರು.</p>.<p>ಪಕ್ಷದ ಪ್ರಮುಖರ ಸಮಿತಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ತನ್ನ ಒಳಜಗಳದ ಕಾರಣಕ್ಕೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದೆ. ಜನಹಿತಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ’ ಎಂದು ಟೀಕಿಸಿದರು.</p>.<p>‘ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಯಕರು, ಈಗ ತಾವೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಮಗಾಗಿ ಸರ್ಕಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮೂಲೆಗೆ ತಳ್ಳಿದ್ದಾರೆ. ದೆಹಲಿಯ ಕಾಂಗ್ರೆಸ್ ತಂಡಕ್ಕೆ ಕರ್ನಾಟಕವು ಎಟಿಎಂ ಆಗಿದೆ’ ಎಂದು ಆಪಾದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-36714794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>