<p><strong>ಬೆಂಗಳೂರು:</strong> ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮಂಗಳವಾರ ಕೆ. ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರು ಅಡ್ಡಿಪಡಿಸಿರುವುದು ವರದಿಯಾಗಿದೆ.</p>.<p>ಇದರಿಂದಾಗಿ ಮುಜುಗರಕ್ಕೊಳಗಾದ ಸಿದ್ದರಾಮಯ್ಯ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆಇಳಿದಿರುವ ಘಟನೆ ನಡೆದಿದೆ.</p>.<p>ಈ ಎಲ್ಲ ನಾಟಕೀಯ ಬೆಳವಣಿಗೆಯಿಂದಾಗಿ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮತ್ತೆ ಅಪಸ್ವರ ಭುಗಿಲೆದ್ದಿದೆ. </p>.<p>ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಕಡೆಗಣಿಸಲಾಗಿದೆ ಎಂದು ಅವರ ಬೆಂಬಲಿಗರು ಘೋಷಣೆಯನ್ನು ಕೂಗಿದರು. ಕೆಲವರು ಜಮೀರ್ ಫೋಟೊ ಹಿಡಿದು ಘೋಷಣೆಗಳನ್ನು ಕೂಗಿದ್ದರಲ್ಲದೆ ಸಿದ್ದು ಭಾಷಣವನ್ನು ಅಡ್ಡಿಗೊಳಿಸಿದರು.</p>.<p>ಈ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ಬಗ್ಗೆ ಗರಂ ಆದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಕಾಂಗ್ರೆಸ್ ದ್ರೋಹಿಗಳು ಘೋಷಣೆಗಳನ್ನು ಕೂಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆ ಮಾಡುವಂತೆ ಸಲಹೆ ಮಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮಂಗಳವಾರ ಕೆ. ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರು ಅಡ್ಡಿಪಡಿಸಿರುವುದು ವರದಿಯಾಗಿದೆ.</p>.<p>ಇದರಿಂದಾಗಿ ಮುಜುಗರಕ್ಕೊಳಗಾದ ಸಿದ್ದರಾಮಯ್ಯ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆಇಳಿದಿರುವ ಘಟನೆ ನಡೆದಿದೆ.</p>.<p>ಈ ಎಲ್ಲ ನಾಟಕೀಯ ಬೆಳವಣಿಗೆಯಿಂದಾಗಿ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮತ್ತೆ ಅಪಸ್ವರ ಭುಗಿಲೆದ್ದಿದೆ. </p>.<p>ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಕಡೆಗಣಿಸಲಾಗಿದೆ ಎಂದು ಅವರ ಬೆಂಬಲಿಗರು ಘೋಷಣೆಯನ್ನು ಕೂಗಿದರು. ಕೆಲವರು ಜಮೀರ್ ಫೋಟೊ ಹಿಡಿದು ಘೋಷಣೆಗಳನ್ನು ಕೂಗಿದ್ದರಲ್ಲದೆ ಸಿದ್ದು ಭಾಷಣವನ್ನು ಅಡ್ಡಿಗೊಳಿಸಿದರು.</p>.<p>ಈ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ಬಗ್ಗೆ ಗರಂ ಆದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಕಾಂಗ್ರೆಸ್ ದ್ರೋಹಿಗಳು ಘೋಷಣೆಗಳನ್ನು ಕೂಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆ ಮಾಡುವಂತೆ ಸಲಹೆ ಮಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>