<p><strong>ನವದೆಹಲಿ:</strong> ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದೆ.</p>.ರಾಜೀನಾಮೆಗೆ ಸಿದ್ದರಾಮಯ್ಯ ಅಣಿ: ಡಿಕೆಶಿ ಪಟ್ಟಕ್ಕೆ ಕಾಂಗ್ರೆಸ್ ವರಿಷ್ಠರ ತಯಾರಿ.<p>ಶಿವಕುಮಾರ್ ಅವರು ಲೋಕಸಭಾ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ 2023ರಲ್ಲಿ ಸರ್ಕಾರ ರಚನೆಯ ಸಂದರ್ಭದಲ್ಲಿ ತಿಳಿಸಿತ್ತು. ಲೋಕಸಭಾ ಚುನಾವಣೆಯ ಬಳಿಕ ಶಿವಕುಮಾರ್ ಅವರನ್ನು ಅಧ್ಯಕ್ಷ ಗಾದಿಯಿಂದ ಇಳಿಸಲು ಸಿದ್ದರಾಮಯ್ಯ ಬಣ ಪ್ರಯತ್ನ ನಡೆಸಿತ್ತು. ಅಧಿಕಾರ ಹಸ್ತಾಂತರದ ಗೊಂದಲ ಇತ್ಯರ್ಥವಾಗುವ ವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದರು.</p><p>ಇನ್ನೊಂದೆಡೆ, ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೈಕಮಾಂಡ್ಗೆ ತಿಳಿಸಿದ್ದರು. 2028ಕ್ಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹಲವು ಸಲ ಹೇಳಿಕೆ ನೀಡಿದ್ದರು.</p>.ನೀಟ್ ರದ್ದು ಮಾಡಿ, ರಾಜ್ಯಕ್ಕೆ ಅಧಿಕಾರ ಕೊಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ .<p><strong>ಮೂರು ಅಥವಾ ಡಿಸಿಎಂ?:</strong> ಮೂರು ಅಥವಾ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಂಭವ ಇದೆ. ಲಿಂಗಾಯತ, ಮುಸ್ಲಿಂ, ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ತ್ಯಾಗಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.</p><p><strong>ರಾಜ್ಯಸಭೆಗೆ ಯಾರು?:</strong> ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರನ್ನು ಬಹುತೇಕ ಆಖೈರುಗೊಳಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರಾಯ್ಕೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರೂ ಕೇಳಿಬಂದಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಶಾಸಕಿ ಅಂಜಲಿ ನಿಂಬಾಳಕರ ಹೆಸರು ಮುಂಚೂಣಿಯಲ್ಲಿದೆ. ಮೂರನೇ ಅಭ್ಯರ್ಥಿಯಾಗಿ ಅನ್ಯ ರಾಜ್ಯದವರಿಗೆ ಮಣೆ ಹಾಕಲು ಹೈಕಮಾಂಡ್ ಮುಂದಾಗಿದೆ.</p>.20 ದಿನದಲ್ಲಿ 3ಪ್ರಮುಖ ನಿರ್ಧಾರ: ದುರ್ಬಲ ಅಲ್ಲ ಎಂದು ಸಾರಿದ ಕಾಂಗ್ರೆಸ್ ಹೈಕಮಾಂಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದೆ.</p>.ರಾಜೀನಾಮೆಗೆ ಸಿದ್ದರಾಮಯ್ಯ ಅಣಿ: ಡಿಕೆಶಿ ಪಟ್ಟಕ್ಕೆ ಕಾಂಗ್ರೆಸ್ ವರಿಷ್ಠರ ತಯಾರಿ.<p>ಶಿವಕುಮಾರ್ ಅವರು ಲೋಕಸಭಾ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ 2023ರಲ್ಲಿ ಸರ್ಕಾರ ರಚನೆಯ ಸಂದರ್ಭದಲ್ಲಿ ತಿಳಿಸಿತ್ತು. ಲೋಕಸಭಾ ಚುನಾವಣೆಯ ಬಳಿಕ ಶಿವಕುಮಾರ್ ಅವರನ್ನು ಅಧ್ಯಕ್ಷ ಗಾದಿಯಿಂದ ಇಳಿಸಲು ಸಿದ್ದರಾಮಯ್ಯ ಬಣ ಪ್ರಯತ್ನ ನಡೆಸಿತ್ತು. ಅಧಿಕಾರ ಹಸ್ತಾಂತರದ ಗೊಂದಲ ಇತ್ಯರ್ಥವಾಗುವ ವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದರು.</p><p>ಇನ್ನೊಂದೆಡೆ, ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೈಕಮಾಂಡ್ಗೆ ತಿಳಿಸಿದ್ದರು. 2028ಕ್ಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹಲವು ಸಲ ಹೇಳಿಕೆ ನೀಡಿದ್ದರು.</p>.ನೀಟ್ ರದ್ದು ಮಾಡಿ, ರಾಜ್ಯಕ್ಕೆ ಅಧಿಕಾರ ಕೊಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ .<p><strong>ಮೂರು ಅಥವಾ ಡಿಸಿಎಂ?:</strong> ಮೂರು ಅಥವಾ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಂಭವ ಇದೆ. ಲಿಂಗಾಯತ, ಮುಸ್ಲಿಂ, ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ತ್ಯಾಗಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.</p><p><strong>ರಾಜ್ಯಸಭೆಗೆ ಯಾರು?:</strong> ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರನ್ನು ಬಹುತೇಕ ಆಖೈರುಗೊಳಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರಾಯ್ಕೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರೂ ಕೇಳಿಬಂದಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಶಾಸಕಿ ಅಂಜಲಿ ನಿಂಬಾಳಕರ ಹೆಸರು ಮುಂಚೂಣಿಯಲ್ಲಿದೆ. ಮೂರನೇ ಅಭ್ಯರ್ಥಿಯಾಗಿ ಅನ್ಯ ರಾಜ್ಯದವರಿಗೆ ಮಣೆ ಹಾಕಲು ಹೈಕಮಾಂಡ್ ಮುಂದಾಗಿದೆ.</p>.20 ದಿನದಲ್ಲಿ 3ಪ್ರಮುಖ ನಿರ್ಧಾರ: ದುರ್ಬಲ ಅಲ್ಲ ಎಂದು ಸಾರಿದ ಕಾಂಗ್ರೆಸ್ ಹೈಕಮಾಂಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>