ರಾಜ್ಯದಲ್ಲಿ ಸಂಘದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಟೀಕೆಗಳು ತುಷ್ಟೀಕರಣದ ರಾಜಕೀಯದ ಭಾಗವಾಗಿದೆ. ಆ ಪಕ್ಷಕ್ಕೆ ಹಿಂದೂಗಳ ಮತ ಬೇಕಿಲ್ಲ. ಬದಲಿಗೆ, ಜೆಡಿಎಸ್ ಪರ ಇರುವ ಮುಸ್ಲಿಮರ ಮತಗಳನ್ನು ತನ್ನತ್ತ ಸೆಳೆಯಲು ಸಂಘವನ್ನು ಗುರಿಯಾಗಿಟ್ಟುಕೊಂಡು ನಿರಂತರವಾಗಿ ಟೀಕೆಗಳನ್ನು ಮಾಡುತ್ತಿರುವ ಆ ಪಕ್ಷದ ಮುಖಂಡರು, ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.