<p><strong>ಬೆಂಗಳೂರು: </strong>ಪ್ರಧಾನಿಯವರ ಪ್ರಯೋಗಶಾಲೆಯ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿವೆ ಎಂದು ‘ಅಗ್ನಿಪಥ’ ಯೋಜನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಟೀಕಿಸಿದೆ.</p>.<p>ಯೋಜನೆಯನ್ನು ಟೀಕಿಸಿ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಪ್ರತಿ ವರ್ಷ 60,000 ಸೈನಿಕರು ನಿವೃತ್ತರಾಗುತ್ತಾರೆ. ಅವರಲ್ಲಿ 3,000 ನಿವೃತ್ತ ಯೋಧರು ಮಾತ್ರ ಸರ್ಕಾರಿ ಉದ್ಯೋಗ ಪಡೆಯುತ್ತಿದ್ದಾರೆ. 4 ವರ್ಷಗಳ ಗುತ್ತಿಗೆಯಲ್ಲಿ ನಿವೃತ್ತರಾಗುವ ಸಾವಿರಾರು 'ಅಗ್ನಿವೀರ'ರ ಭವಿಷ್ಯವೇನು? ಪ್ರಧಾನಿಯವರ ಪ್ರಯೋಗಶಾಲೆಯ ಈ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿವೆ!’ ಎಂದು ಉಲ್ಲೇಖಿಸಿದೆ.</p>.<p><a href="https://www.prajavani.net/detail/explainer-why-indians-angry-on-agnipath-scheme-947351.html" target="_blank">ಆಳ-ಅಗಲ| ‘ಅಗ್ನಿಪಥ’ಕ್ಕೆ ವಿರೋಧವೇಕೆ?</a></p>.<p>ಅಗ್ನಿಪಥ ಯೋಜನೆ ವಿರುದ್ಧ ದೇಶದ ಹಲವೆಡೆ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಗಳ ವೇಳೆ ಭಾರತೀಯ ರೈಲ್ವೆಗೆ ಸಂಬಂಧಿಸಿದ ಅಪಾರ ಪ್ರಮಾಣದ ಆಸ್ತಿ–ಪಾಸ್ತಿಗೆ ಹಾನಿಯಾಗಿತ್ತು. ಪರಿಣಾಮವಾಗಿ ₹259.44 ಕೋಟಿ ನಷ್ಟ ಉಂಟಾಗಿದೆ ಎಂದು ರೈಲ್ವೆ ಇಲಾಖೆ ಇತ್ತೀಚೆಗೆ ತಿಳಿಸಿತ್ತು.</p>.<p><a href="https://www.prajavani.net/india-news/agnipath-scheme-protest-railways-suffers-rs-259-crore-due-956677.html" itemprop="url">ಅಗ್ನಿಪಥ ವಿರೋಧಿ ಪ್ರತಿಭಟನೆ: ರೈಲ್ವೆಗೆ ₹259.44 ಕೋಟಿ ನಷ್ಟ: ರೈಲ್ವೆ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಧಾನಿಯವರ ಪ್ರಯೋಗಶಾಲೆಯ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿವೆ ಎಂದು ‘ಅಗ್ನಿಪಥ’ ಯೋಜನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಟೀಕಿಸಿದೆ.</p>.<p>ಯೋಜನೆಯನ್ನು ಟೀಕಿಸಿ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಪ್ರತಿ ವರ್ಷ 60,000 ಸೈನಿಕರು ನಿವೃತ್ತರಾಗುತ್ತಾರೆ. ಅವರಲ್ಲಿ 3,000 ನಿವೃತ್ತ ಯೋಧರು ಮಾತ್ರ ಸರ್ಕಾರಿ ಉದ್ಯೋಗ ಪಡೆಯುತ್ತಿದ್ದಾರೆ. 4 ವರ್ಷಗಳ ಗುತ್ತಿಗೆಯಲ್ಲಿ ನಿವೃತ್ತರಾಗುವ ಸಾವಿರಾರು 'ಅಗ್ನಿವೀರ'ರ ಭವಿಷ್ಯವೇನು? ಪ್ರಧಾನಿಯವರ ಪ್ರಯೋಗಶಾಲೆಯ ಈ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿವೆ!’ ಎಂದು ಉಲ್ಲೇಖಿಸಿದೆ.</p>.<p><a href="https://www.prajavani.net/detail/explainer-why-indians-angry-on-agnipath-scheme-947351.html" target="_blank">ಆಳ-ಅಗಲ| ‘ಅಗ್ನಿಪಥ’ಕ್ಕೆ ವಿರೋಧವೇಕೆ?</a></p>.<p>ಅಗ್ನಿಪಥ ಯೋಜನೆ ವಿರುದ್ಧ ದೇಶದ ಹಲವೆಡೆ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಗಳ ವೇಳೆ ಭಾರತೀಯ ರೈಲ್ವೆಗೆ ಸಂಬಂಧಿಸಿದ ಅಪಾರ ಪ್ರಮಾಣದ ಆಸ್ತಿ–ಪಾಸ್ತಿಗೆ ಹಾನಿಯಾಗಿತ್ತು. ಪರಿಣಾಮವಾಗಿ ₹259.44 ಕೋಟಿ ನಷ್ಟ ಉಂಟಾಗಿದೆ ಎಂದು ರೈಲ್ವೆ ಇಲಾಖೆ ಇತ್ತೀಚೆಗೆ ತಿಳಿಸಿತ್ತು.</p>.<p><a href="https://www.prajavani.net/india-news/agnipath-scheme-protest-railways-suffers-rs-259-crore-due-956677.html" itemprop="url">ಅಗ್ನಿಪಥ ವಿರೋಧಿ ಪ್ರತಿಭಟನೆ: ರೈಲ್ವೆಗೆ ₹259.44 ಕೋಟಿ ನಷ್ಟ: ರೈಲ್ವೆ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>