ಈ ಬಗ್ಗೆ ಕಾಂಗ್ರೆಸ್ ‘ಎಕ್ಸ್’ನಲ್ಲಿ ಹೀಗೆ ಬರೆದುಕೊಂಡಿದೆ.
‘23 ಇಲಾಖೆಗಳ 61 ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಪ್ರಸಕ್ತ ವರ್ಷ ಕೇಂದ್ರ ಸರ್ಕಾರ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ. ಈ ಹಿಂದೆ ಜೆ.ಪಿ ನಡ್ಡಾ ಅವರು ಕಾಂಗ್ರೆಸ್ ಗೆದ್ದರೆ ಕೇಂದ್ರದ ಅನುದಾನ ನಿಲ್ಲಲಿದೆ ಎಂದು ಬೆದರಿಕೆ ಹಾಕಿದ್ದರು, ಇಂದು ಅದೇ ಬೆದರಿಕೆಯಂತೆ ನಡೆದುಕೊಳ್ಳುತ್ತಿದೆಯೇ ಕೇಂದ್ರ ಸರ್ಕಾರ?. ಬಿಜೆಪಿಯ 25 ಸಂಸದರ ಕೆಲಸವೇನು? ಕರ್ನಾಟಕಕ್ಕೆ ಆಗುತ್ತಿರುವ ಈ ಅನ್ಯಾಯವನ್ನು ಏಕೆ ಪ್ರಶ್ನಿಸುತ್ತಿಲ್ಲ? ಕರ್ನಾಟಕದ ಮೇಲೆ ಈ ರೀತಿ ದ್ವೇಷ ಸಾಧಿಸುವ ನರೇಂದ್ರ ಮೋದಿಯವರು ವಾಜಪೇಯಿಯವರು ಹೇಳಿದ್ದ ರಾಜಧರ್ಮದ ಪಾಠವನ್ನು ನೆನಪಿಸಿಕೊಳ್ಳಲಿ’.