ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ: ಡಿ.ಕೆ.ಶಿವಕುಮಾರ್‌

Last Updated 24 ಮಾರ್ಚ್ 2021, 9:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿರುವ ಸಿಡಿ ವಿಚಾರವೀಗ ರಾಜಕೀಯ ಮುಖಂಡರ ನಡುವಿನ ವಾಗ್ಯುದ್ದಕ್ಕೆ ಕಾರಣವಾಗಿದೆ.

'ಬೇರೆಯವರೇನು ಏಕಪತ್ನಿ ವ್ರತಸ್ಥರಾ?' ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ಕೆ.ಸುಧಾಕರ್‌ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸಿಡಿ ವಿಚಾರ ಕುರಿತು ಬೆಂಗಳೂರಿನಲ್ಲಿ ಬುಧವಾರ ಮಾತನಾಡಿರುವ ಸಚಿವ ಸುಧಾಕರ್, 'ಯಾರ್‍ಯಾರು ಮುಖ್ಯಮಂತ್ರಿ ಆಗಿದ್ದಾಗ ಏನೇನು ಮಾಡಿದ್ದಾರೆ ಎಂಬುದು ಹೊರಬರಲಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಶ್ರೀರಾಮಚಂದ್ರರೆಂದು ಹೇಳಿಕೊಳ್ಳುತ್ತಿದ್ದಾರಲ್ಲ ಅವರಿಗೆ ಸವಾಲು ಹಾಕುತ್ತೇನೆ. 224 ಶಾಸಕರು ತನಿಖೆ ಎದುರಿಸಲಿ, ಯಾರ್‍ಯಾರು ವಿವಾಹೇತರ ಮತ್ತು ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಾಗಲಿ. ಯಾರೆಲ್ಲ ಶ್ರೀರಾಮಚಂದ್ರರು.. ಮರ್ಯಾದಾ ಪುರುಷರು ಎಂಬುದು ತಿಳಿದು ಹೋಗಲಿ' ಎಂದು ಅವರು ಹೇಳಿದ್ದಾರೆ.

ಸುಧಾಕರ್‌ ನೀಡಿರುವ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, 'ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ' ಎಂದು ತಿಳಿಸಿದ್ದಾರೆ.

ನೋಡಿ...

ಇದೇ ವೇಳೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಹೇಳಿಕೆಗಳನ್ನು 'ನೈತಿಕ ದಿವಾಳಿತನದ ಪ್ರದರ್ಶನ' ಎಂದು ಕರ್ನಾಟಕ ಕಾಂಗ್ರೆಸ್‌ ಕುಹಕವಾಡಿದೆ.

ಈ ಮಧ್ಯೆ, ಸಿ.ಡಿ ಪ್ರಕರಣದ ತನಿಖೆಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಉಸ್ತುವಾರಿಯಲ್ಲೇ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಸದಸ್ಯರು ವಿಧಾನಸಭೆಯಲ್ಲಿ ಮೂರನೆ ದಿನವೂ ಧರಣಿ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT