ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಕಣ್ಮುಚ್ಚಿರುವುದು ದುರಂತ: ಕಾಂಗ್ರೆಸ್

Last Updated 30 ನವೆಂಬರ್ 2021, 12:32 IST
ಅಕ್ಷರ ಗಾತ್ರ

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರವು ಅವರ ನೆರವಿಗೆ ಧಾವಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಲಾಗಿದೆ.

‘ಪ್ರತಿ ಬೆಳೆಗೂ ಅಕಾಲಿಕ ಮಳೆ ಮಾರಕವಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಮುಂದಾಗುವ ಸ್ಥಿತಿಯಲ್ಲಿದ್ದಾರೆ. ಈ ಸಮಯದಲ್ಲಿ ಸರ್ಕಾರ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಸಾಲ ಮನ್ನಾದ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದರೆ ಸರ್ಕಾರ ಕಣ್ಮುಚ್ಚಿರುವುದು, ಕೃಷಿ ಸಚಿವರು ಜವಾಬ್ದಾರಿ ಮರೆತಿರುವುದು ನಾಡಿನ ದುರಂತ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT