<p><strong>ಬೆಂಗಳೂರು</strong>: ಬಾಕಿ ಇರುವ ₹37 ಸಾವಿರ ಕೋಟಿಯನ್ನು ಸರ್ಕಾರ ಮಾರ್ಚ್ 5 ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯದಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಗುತ್ತಿಗೆ ಸಂಘದಾರರ ಸಂಘ ನಿರ್ಧರಿಸಿದೆ.</p><p>ಮೂರು ವರ್ಷದಿಂದ ಬಿಲ್ ಪಾವತಿಯಾಗದ್ದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ಸಾಲ ಪಾವತಿಸಲಾಗದೆ ವಿಷ ಕುಡಿಯುವ ಸ್ಥಿತಿಗೆ ತಲುಪಿದ್ದಾರೆ ಎಂದು ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p><p>ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಣ್ಣ ನೀರಾವರಿ, ನಗರಾಭಿವೃದ್ಧಿ, ವಸತಿ, ಕಾರ್ಮಿಕ, ಬಿಬಿಎಂಪಿ (ಜಿಬಿಎ) ನಲ್ಲಿ 2021-22, 2022-23, 2023-24 ರಿಂದ ₹37 ಸಾವಿರ ಕೋಟಿಗೂ ಹೆಚ್ಚು ಹಣ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು.</p><p>ಹಿಂದಿನ ಸರ್ಕಾರಕ್ಕಿಂತ ಈ ಸರ್ಕಾರದಲ್ಲಿ ಕಮಿಷನ್ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಭೆ ಕರೆದರೆ ಎಲ್ಲ ಮಾಹಿತಿಯನ್ನು ದಾಖಲೆ ಸಹಿತ ನೀಡುವುದಾಗಿ ಅವರು ಹೇಳಿದರು.</p><p>2025 ರ ಏಪ್ರಿಲ್ ನಲ್ಲಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದನ್ನು ಉಳಿಸಿಕೊಂಡಿಲ್ಲ. ನಮ್ಮ ಸಮಸ್ಯೆ ಆಲಿಸಲು ಸಭೆಯನ್ನೂ ಕರೆದಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಕಿ ಇರುವ ₹37 ಸಾವಿರ ಕೋಟಿಯನ್ನು ಸರ್ಕಾರ ಮಾರ್ಚ್ 5 ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯದಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಗುತ್ತಿಗೆ ಸಂಘದಾರರ ಸಂಘ ನಿರ್ಧರಿಸಿದೆ.</p><p>ಮೂರು ವರ್ಷದಿಂದ ಬಿಲ್ ಪಾವತಿಯಾಗದ್ದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ಸಾಲ ಪಾವತಿಸಲಾಗದೆ ವಿಷ ಕುಡಿಯುವ ಸ್ಥಿತಿಗೆ ತಲುಪಿದ್ದಾರೆ ಎಂದು ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p><p>ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಣ್ಣ ನೀರಾವರಿ, ನಗರಾಭಿವೃದ್ಧಿ, ವಸತಿ, ಕಾರ್ಮಿಕ, ಬಿಬಿಎಂಪಿ (ಜಿಬಿಎ) ನಲ್ಲಿ 2021-22, 2022-23, 2023-24 ರಿಂದ ₹37 ಸಾವಿರ ಕೋಟಿಗೂ ಹೆಚ್ಚು ಹಣ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು.</p><p>ಹಿಂದಿನ ಸರ್ಕಾರಕ್ಕಿಂತ ಈ ಸರ್ಕಾರದಲ್ಲಿ ಕಮಿಷನ್ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಭೆ ಕರೆದರೆ ಎಲ್ಲ ಮಾಹಿತಿಯನ್ನು ದಾಖಲೆ ಸಹಿತ ನೀಡುವುದಾಗಿ ಅವರು ಹೇಳಿದರು.</p><p>2025 ರ ಏಪ್ರಿಲ್ ನಲ್ಲಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದನ್ನು ಉಳಿಸಿಕೊಂಡಿಲ್ಲ. ನಮ್ಮ ಸಮಸ್ಯೆ ಆಲಿಸಲು ಸಭೆಯನ್ನೂ ಕರೆದಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>