<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಹೊಸದಾಗಿ 5,199 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿಯತ್ತ (96,141) ದಾಪುಗಾಲು ಇಟ್ಟಿದೆ.</p>.<p>ಕೊರೊನಾ ಸೋಂಕಿತರಲ್ಲಿ ಮತ್ತೆ 82 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಕೋವಿಡ್ನಿಂದ ಸತ್ತವರ ಸಂಖ್ಯೆ 1,878ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಪ್ರತಿನಿತ್ಯ ಸರಾಸರಿ 4 ಸಾವಿರದಿಂದ 5 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಈ ಅವಧಿಯಲ್ಲಿ 32,369 ಮಂದಿ ಸೋಂಕಿತರಾಗಿದ್ದಾರೆ. ಹೀಗಾಗಿ ಮಾರ್ಚ್ 8ರಂದು ರಾಜ್ಯದಲ್ಲಿ ಕಾಣಿಸಿಕೊಂಡ ಕೋವಿಡ್, ಸೋಮವಾರ (ಜುಲೈ 27) ಒಂದು ಲಕ್ಷದ ಗಡಿ ದಾಟುವ ಸಾಧ್ಯತೆಯಿದೆ.ಸೋಂಕಿತರಲ್ಲಿ ಬೆಂಗಳೂರಿನಲ್ಲಿ 647 ಸೇರಿದಂತೆ ರಾಜ್ಯದಲ್ಲಿ 2,088 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 35,838ಕ್ಕೆ ತಲುಪಿದೆ.</p>.<p>ಬೆಂಗಳೂರಿನಲ್ಲಿ ಒಂದೇ ದಿನ 1,950 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿವೆ. 647 ಮಂದಿ ಗುಣಮುಖರಾಗಿದ್ದು, 29 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.</p>.<p>ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳು 96,141.</p>.<p>ಒಂದೇ ದಿನ ಬಳ್ಳಾರಿಯಲ್ಲಿ 579, ಮೈಸೂರಿನಲ್ಲಿ 231, ಬೆಂಗಳೂರು ಗ್ರಾಮಾಂತರದಲ್ಲಿ 230, ದಕ್ಷಿಣ ಕನ್ನಡದಲ್ಲಿ 199, ಧಾರವಾಡದಲ್ಲಿ 165 ಹಾಗೂ ಹಾಸನದಲ್ಲಿ 164 ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಹೊಸದಾಗಿ 5,199 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿಯತ್ತ (96,141) ದಾಪುಗಾಲು ಇಟ್ಟಿದೆ.</p>.<p>ಕೊರೊನಾ ಸೋಂಕಿತರಲ್ಲಿ ಮತ್ತೆ 82 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಕೋವಿಡ್ನಿಂದ ಸತ್ತವರ ಸಂಖ್ಯೆ 1,878ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಪ್ರತಿನಿತ್ಯ ಸರಾಸರಿ 4 ಸಾವಿರದಿಂದ 5 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಈ ಅವಧಿಯಲ್ಲಿ 32,369 ಮಂದಿ ಸೋಂಕಿತರಾಗಿದ್ದಾರೆ. ಹೀಗಾಗಿ ಮಾರ್ಚ್ 8ರಂದು ರಾಜ್ಯದಲ್ಲಿ ಕಾಣಿಸಿಕೊಂಡ ಕೋವಿಡ್, ಸೋಮವಾರ (ಜುಲೈ 27) ಒಂದು ಲಕ್ಷದ ಗಡಿ ದಾಟುವ ಸಾಧ್ಯತೆಯಿದೆ.ಸೋಂಕಿತರಲ್ಲಿ ಬೆಂಗಳೂರಿನಲ್ಲಿ 647 ಸೇರಿದಂತೆ ರಾಜ್ಯದಲ್ಲಿ 2,088 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 35,838ಕ್ಕೆ ತಲುಪಿದೆ.</p>.<p>ಬೆಂಗಳೂರಿನಲ್ಲಿ ಒಂದೇ ದಿನ 1,950 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿವೆ. 647 ಮಂದಿ ಗುಣಮುಖರಾಗಿದ್ದು, 29 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.</p>.<p>ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳು 96,141.</p>.<p>ಒಂದೇ ದಿನ ಬಳ್ಳಾರಿಯಲ್ಲಿ 579, ಮೈಸೂರಿನಲ್ಲಿ 231, ಬೆಂಗಳೂರು ಗ್ರಾಮಾಂತರದಲ್ಲಿ 230, ದಕ್ಷಿಣ ಕನ್ನಡದಲ್ಲಿ 199, ಧಾರವಾಡದಲ್ಲಿ 165 ಹಾಗೂ ಹಾಸನದಲ್ಲಿ 164 ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>