<p>ಬೆಂಗಳೂರು: ‘ಇಂದು ಕೇರಳದಲ್ಲಿ ಶೇ 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದ್ದರೆ ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ದಕ್ಕಿದೆ’ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದರು.</p>.<p>ಹೈಕೋರ್ಟ್ ವಕೀಲ ತುಳವನೂರು ಶಂಕರಪ್ಪ ಅವರು ಬರೆದಿರುವ ‘ಓವರ್ಸೀಸ್ ಟ್ರಾವೆಲಾಗ್’ ಪ್ರವಾಸ ಕಥನವನ್ನು ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ಬುಧವಾರ ಅವರು ಬಿಡುಗಡೆ ಮಾಡಿದರು.</p>.<p>‘ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನ ಪಡೆದಿದೆ. ಈ ಪಿಡುಗನ್ನು ಕೂಡಲೇ ತಡೆಯದೇ ಹೋದರೆ ಭವಿಷ್ಯದಲ್ಲಿ ಭೀಕರ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದರು.</p>.<p>‘ನಾನು ಹೋದ ಕಡೆಯಲ್ಲೆಲ್ಲಾ ಆಸ್ಪತ್ರೆ, ಶಾಲೆ ಹಾಸ್ಟೆಲ್ಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶಪಥ ಕೈಗೊಳ್ಳುವಂತೆ ಅಲ್ಲಿನ ಸಿಬ್ಬಂದಿಗೆ ಪ್ರೇರೇಪಿಸುತ್ತಿದ್ದೇನೆ. ಈ ಯಜ್ಞದಲ್ಲಿ ವಕೀಲರೂ ಪಾಲ್ಗೊಂಡು ಸಮಾಜ ಸುಧಾರಣೆಗೆ ಮತ್ತು ದುಷ್ಟರ ಸಂಹಾರಕ್ಕೆ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>‘ಇಂದು ಮಹಿಳೆಯರು ಅತ್ಯಂತ ಶಕ್ತಿಶಾಲಿ ಎನ್ನುತ್ತಿದ್ದೇವೆ. ಆದರೆ, ಭ್ರಷ್ಟಾಚಾರದಲ್ಲೂ ಅವರು ಶಕ್ತಿಶಾಲಿ ಆಗಿದ್ದಾರೆ. ಹಾಗಾಗಿ, ಭ್ರಷ್ಟಾಚಾರವನ್ನು ಹೇಗೆ ಮತ್ತು ಎಲ್ಲಿಂದ ತಡೆಯಬಹುದು ಎಂಬುದನ್ನು ವಕೀಲ ಸಮೂಹವೊಂದೇ ಸಮರ್ಥವಾಗಿ ನಿರ್ಧರಿಸಬಲ್ಲದು’ ಎಂದು ಅಭಿಪ್ರಾಯಪಟ್ಟರು.</p>.<p>ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್, ‘ವಕೀಲರು ತಮ್ಮೊಳಗಿನ ಪ್ರತಿಭೆಯನ್ನು ಹೊರಚೆಲ್ಲಲು ಉದ್ಯುಕ್ತರಾಗಬೇಕು’ ಎಂದರು.</p>.<p>ಹಿರಿಯ ವಕೀಲ ಎಂ.ಟಿ.ನಾಣಯ್ಯ ಮಾತನಾಡಿ, ‘ಇಂದು ಎಲ್ಲ ಇಲಾಖೆಗಳಲ್ಲೂ ಭ್ರಷ್ರಾಚಾರ ತಾಂಡವಾಡುತ್ತಿದ್ದು ಪ್ರತಿಯೊಂದು ಇಲಾಖೆಗೂ ಪ್ರತ್ಯೇಕ ಲೋಕಾಯುಕ್ತ ಕಚೇರಿ ತೆರೆಯುವಂತಹ ದುಃಸ್ಥಿತಿ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ತುಳವನೂರು ಶಂಕರಪ್ಪ, ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಇಂದು ಕೇರಳದಲ್ಲಿ ಶೇ 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದ್ದರೆ ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ದಕ್ಕಿದೆ’ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದರು.</p>.<p>ಹೈಕೋರ್ಟ್ ವಕೀಲ ತುಳವನೂರು ಶಂಕರಪ್ಪ ಅವರು ಬರೆದಿರುವ ‘ಓವರ್ಸೀಸ್ ಟ್ರಾವೆಲಾಗ್’ ಪ್ರವಾಸ ಕಥನವನ್ನು ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ಬುಧವಾರ ಅವರು ಬಿಡುಗಡೆ ಮಾಡಿದರು.</p>.<p>‘ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನ ಪಡೆದಿದೆ. ಈ ಪಿಡುಗನ್ನು ಕೂಡಲೇ ತಡೆಯದೇ ಹೋದರೆ ಭವಿಷ್ಯದಲ್ಲಿ ಭೀಕರ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದರು.</p>.<p>‘ನಾನು ಹೋದ ಕಡೆಯಲ್ಲೆಲ್ಲಾ ಆಸ್ಪತ್ರೆ, ಶಾಲೆ ಹಾಸ್ಟೆಲ್ಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶಪಥ ಕೈಗೊಳ್ಳುವಂತೆ ಅಲ್ಲಿನ ಸಿಬ್ಬಂದಿಗೆ ಪ್ರೇರೇಪಿಸುತ್ತಿದ್ದೇನೆ. ಈ ಯಜ್ಞದಲ್ಲಿ ವಕೀಲರೂ ಪಾಲ್ಗೊಂಡು ಸಮಾಜ ಸುಧಾರಣೆಗೆ ಮತ್ತು ದುಷ್ಟರ ಸಂಹಾರಕ್ಕೆ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>‘ಇಂದು ಮಹಿಳೆಯರು ಅತ್ಯಂತ ಶಕ್ತಿಶಾಲಿ ಎನ್ನುತ್ತಿದ್ದೇವೆ. ಆದರೆ, ಭ್ರಷ್ಟಾಚಾರದಲ್ಲೂ ಅವರು ಶಕ್ತಿಶಾಲಿ ಆಗಿದ್ದಾರೆ. ಹಾಗಾಗಿ, ಭ್ರಷ್ಟಾಚಾರವನ್ನು ಹೇಗೆ ಮತ್ತು ಎಲ್ಲಿಂದ ತಡೆಯಬಹುದು ಎಂಬುದನ್ನು ವಕೀಲ ಸಮೂಹವೊಂದೇ ಸಮರ್ಥವಾಗಿ ನಿರ್ಧರಿಸಬಲ್ಲದು’ ಎಂದು ಅಭಿಪ್ರಾಯಪಟ್ಟರು.</p>.<p>ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್, ‘ವಕೀಲರು ತಮ್ಮೊಳಗಿನ ಪ್ರತಿಭೆಯನ್ನು ಹೊರಚೆಲ್ಲಲು ಉದ್ಯುಕ್ತರಾಗಬೇಕು’ ಎಂದರು.</p>.<p>ಹಿರಿಯ ವಕೀಲ ಎಂ.ಟಿ.ನಾಣಯ್ಯ ಮಾತನಾಡಿ, ‘ಇಂದು ಎಲ್ಲ ಇಲಾಖೆಗಳಲ್ಲೂ ಭ್ರಷ್ರಾಚಾರ ತಾಂಡವಾಡುತ್ತಿದ್ದು ಪ್ರತಿಯೊಂದು ಇಲಾಖೆಗೂ ಪ್ರತ್ಯೇಕ ಲೋಕಾಯುಕ್ತ ಕಚೇರಿ ತೆರೆಯುವಂತಹ ದುಃಸ್ಥಿತಿ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ತುಳವನೂರು ಶಂಕರಪ್ಪ, ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>