<p><strong>ಬೆಂಗಳೂರು: </strong>ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 5,041 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇಂದು ಮೃತಪಟ್ಟ 115 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 33,148 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 2.28 ರಷ್ಟಾಗಿದೆ. ಖಚಿತ ಪ್ರಕರಣಗಳ ಪ್ರಮಾಣ ಶೇ 3.80ರಷ್ಟಿದೆ. ಸದ್ಯ 1,62,282 ಪ್ರಕರಣಗಳು ಸಕ್ರಿಯವಾಗಿವೆ. 14,785 ಚೇತರಿಸಿಕೊಂಡಿರುವುದಾಗಿ ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.</p>.<p>ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (985) ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಸದ್ಯ 85,195 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಮೈಸೂರು (490), ಹಾಸನ (522), ಬೆಳಗಾವಿ (95), ತುಮಕೂರು (329), ಉಡುಪಿ (107), ಚಿತ್ರದುರ್ಗ (95), ದಕ್ಷಿಣ ಕನ್ನಡ (482) ಶಿವಮೊಗ್ಗ (282) ಮತ್ತು ಚಿಕ್ಕಮಗಳೂರಿನಲ್ಲಿ (224) ಇನ್ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 5,041 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇಂದು ಮೃತಪಟ್ಟ 115 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 33,148 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 2.28 ರಷ್ಟಾಗಿದೆ. ಖಚಿತ ಪ್ರಕರಣಗಳ ಪ್ರಮಾಣ ಶೇ 3.80ರಷ್ಟಿದೆ. ಸದ್ಯ 1,62,282 ಪ್ರಕರಣಗಳು ಸಕ್ರಿಯವಾಗಿವೆ. 14,785 ಚೇತರಿಸಿಕೊಂಡಿರುವುದಾಗಿ ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.</p>.<p>ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (985) ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಸದ್ಯ 85,195 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಮೈಸೂರು (490), ಹಾಸನ (522), ಬೆಳಗಾವಿ (95), ತುಮಕೂರು (329), ಉಡುಪಿ (107), ಚಿತ್ರದುರ್ಗ (95), ದಕ್ಷಿಣ ಕನ್ನಡ (482) ಶಿವಮೊಗ್ಗ (282) ಮತ್ತು ಚಿಕ್ಕಮಗಳೂರಿನಲ್ಲಿ (224) ಇನ್ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>