ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಗೊಬ್ಬರದ ಬೆಲೆ ಗಗನಕ್ಕೇರಿದೆ. ಹೂ, ಹಣ್ಣು, ತರಕಾರಿ ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು’ ಎಂದು ಒತ್ತಾಯಿಸಿದರು. ‘ಲಸಿಕೆ ನೀಡುವುದು ಕೇಂದ್ರದ ಕೆಲಸ. ರಾಜ್ಯ ಸರ್ಕಾರ ಜಾಗತಿಕ ಟೆಂಡರ್ ಕರೆಯುವುದು ಏಕೆ. ಇದರಲ್ಲೂ ಕಮಿಷನ್ ಹೊಡೆಯಲು ಮುಂದಾಗಿದ್ದಾರೆ. ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವರಿಗೂ, ಉಪಮುಖ್ಯಮಂತ್ರಿಗೂ ಸಮನ್ವಯತೆ ಇಲ್ಲ’ ಎಂದರು.