<p>ಕೊಟ್ಟೂರು: ‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ರಾಜ್ಯ ಸರ್ಕಾರ ಗೋ ಹಂತಕರಿಗೆ ರಕ್ಷಣೆಯಾಗಿ ನಿಂತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬಿಜೆಪಿ ಪಕ್ಷದ ಯುವ ಮುಖಂಡ ಎಂ. ಮಲ್ಲಿಕಾರ್ಜುನ್ ಆರೋಪಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ತಹಶೀಲ್ದಾರ್ ಹಾಗೂ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>ಬಿಜೆಪಿ ಮುಖಂಡರಾದ ಬಿ.ಆರ್. ವಿಕ್ರಂ, ಬಸವರಾಜ್ ಕೋನಾಪುರ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಂಜುನಾಥ್ ಕಾಸಲ್ ಮಾತನಾಡಿದರು. ವೀರೇಶ್ ಗೌಡ, ಎಂ.ಎಂ.ಜೆ. ವಾಗೀಶ್, ಬಸವರಾಜ್, ನೂತನ್ ಪ್ರಸಾದ್, ಕಲ್ಲೇಶ್ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-25-179293477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ರಾಜ್ಯ ಸರ್ಕಾರ ಗೋ ಹಂತಕರಿಗೆ ರಕ್ಷಣೆಯಾಗಿ ನಿಂತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬಿಜೆಪಿ ಪಕ್ಷದ ಯುವ ಮುಖಂಡ ಎಂ. ಮಲ್ಲಿಕಾರ್ಜುನ್ ಆರೋಪಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ತಹಶೀಲ್ದಾರ್ ಹಾಗೂ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>ಬಿಜೆಪಿ ಮುಖಂಡರಾದ ಬಿ.ಆರ್. ವಿಕ್ರಂ, ಬಸವರಾಜ್ ಕೋನಾಪುರ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಂಜುನಾಥ್ ಕಾಸಲ್ ಮಾತನಾಡಿದರು. ವೀರೇಶ್ ಗೌಡ, ಎಂ.ಎಂ.ಜೆ. ವಾಗೀಶ್, ಬಸವರಾಜ್, ನೂತನ್ ಪ್ರಸಾದ್, ಕಲ್ಲೇಶ್ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-25-179293477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>