ಬೆಂಗಳೂರು: ‘ಶಿವಮೊಗ್ಗದಲ್ಲಿ ನಡೆದಿದ್ದ ಗಲಾಟೆ ಸಂಬಂಧ ಇದುವರೆಗೂ ಒಟ್ಟು 27 ಪ್ರಕರಣ ದಾಖಲಿಸಿಕೊಂಡು 64 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದರು.
‘ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಸ್ಥಳೀಯ ಪೊಲೀಸರು ಭದ್ರತೆ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಶಿವಮೊಗ್ಗ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಬೇರೆಲ್ಲೂ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.