<p><strong>ಬೆಂಗಳೂರು: </strong>ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ–ಐಜಿಪಿ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್ಟೆಬಲೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಭಾನುವಾರವೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.</p>.<p>‘ನಗರದ ಪೊಲೀಸರು ಸರದಿ ಪ್ರಕಾರ ವೈದ್ಯಕೀಯ ಪರೀಕ್ಷೆಗೆ ಒಳಪಡುತ್ತಿದ್ದಾರೆ. ಇತ್ತೀಚೆಗೆ ಕಾನ್ಸ್ಟೆಬಲ್ ಅವರ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದು ಪಾಸಿಟಿವ್ ಬಂದಿದ್ದು, ಈ ಕಾನ್ಸ್ಟೆಬಲ್ ‘ರೋಗಿ–3195’ ಆಗಿದ್ದಾರೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-covid-19-coronavirus-updates-today-on-31-may-2020-732274.html" itemprop="url" target="_blank">Covid-19 Karnataka Update: ಒಂದೇ ದಿನದಲ್ಲಿ 299 ಹೊಸ ಪ್ರಕರಣ, ರಾಜ್ಯ ತಲ್ಲಣ</a></p>.<p>‘ಕಾನ್ಸ್ಟೆಬಲ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಜೊತೆ ಸಂಪರ್ಕದಲ್ಲಿದ್ದ ಹಲವರನ್ನು ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕದಲ್ಲಿದ್ದವರ ಪಟ್ಟಿ ಮಾಡಿ ಅವರನ್ನೂ ಕ್ವಾರಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<p><strong>ಶಿವಾಜಿನಗರದಲ್ಲಿ ವಾಸ: </strong>ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಯ ಭದ್ರತಾ ವಿಭಾಗದಲ್ಲಿ ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದರು. ಶಿವಾಜಿನಗರದ ಪೊಲೀಸ್ ವಸತಿಗೃಹದಲ್ಲಿ ನೆಲೆಸಿದ್ದರು.</p>.<p>ಮುಖ್ಯ ಕಟ್ಟಡದಲ್ಲಿ ಡಿಜಿಪಿ ಪ್ರವೀಣ್ ಸೂದ್, ಎಡಿಜಿಪಿಗಳು ಹಾಗೂ ಹಲವು ಅಧಿಕಾರಿಗಳ ಕಚೇರಿಗಳು ಇವೆ. ಮುಖ್ಯ ಕಟ್ಟಡದ ಸಮೀಪದಲ್ಲೇ ಮತ್ತೊಂದು ಕಟ್ಟಡದಲ್ಲಿ ಭದ್ರತಾ ವಿಭಾಗದ ಕಚೇರಿ ಇದ್ದು, ಅಲ್ಲಿಯೇ ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದರು.</p>.<p>‘ಕಾನ್ಸ್ಟೆಬಲ್ ಅವರು ಮುಖ್ಯ ಕಟ್ಟಡಕ್ಕೆ ಬಂದಿರಲಿಲ್ಲ. ಹೀಗಾಗಿ ಯಾವುದೇ ಆತಂಕವಿಲ್ಲ. ಆದರೂ ಪೂರ್ತಿ ಕಟ್ಟಡ ಹಾಗೂ ಆವರಣವನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ’ ಎಂದು ಕಚೇರಿ ಅಧಿಕಾರಿಯೊಬ್ಬರು ಹೇಳಿದರು.</p>.<p>ಲಾಕ್ಡೌನ್ ಆದಾಗಿನಿಂದಲೂ ಪೊಲೀಸರು, ಯೋಧರಂತೆ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಇಬ್ಬರು ಕಾನ್ಸ್ಟೆಬಲ್ಗಳಿಗೂ ಸೋಂಕು ತಗುಲಿತ್ತು. ಈಗಾಗಲೇ ಒಬ್ಬರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೊಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/covid-coronavirus-pandemic-police-bengaluru-732018.html" target="_blank">ಕೊರೊನಾ ಸೋಂಕು: ಬೆಂಗಳೂರು ಸಂಚಾರ ಕಾನ್ಸ್ಟೆಬಲ್ ಗುಣಮುಖ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ–ಐಜಿಪಿ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್ಟೆಬಲೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಭಾನುವಾರವೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.</p>.<p>‘ನಗರದ ಪೊಲೀಸರು ಸರದಿ ಪ್ರಕಾರ ವೈದ್ಯಕೀಯ ಪರೀಕ್ಷೆಗೆ ಒಳಪಡುತ್ತಿದ್ದಾರೆ. ಇತ್ತೀಚೆಗೆ ಕಾನ್ಸ್ಟೆಬಲ್ ಅವರ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದು ಪಾಸಿಟಿವ್ ಬಂದಿದ್ದು, ಈ ಕಾನ್ಸ್ಟೆಬಲ್ ‘ರೋಗಿ–3195’ ಆಗಿದ್ದಾರೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-covid-19-coronavirus-updates-today-on-31-may-2020-732274.html" itemprop="url" target="_blank">Covid-19 Karnataka Update: ಒಂದೇ ದಿನದಲ್ಲಿ 299 ಹೊಸ ಪ್ರಕರಣ, ರಾಜ್ಯ ತಲ್ಲಣ</a></p>.<p>‘ಕಾನ್ಸ್ಟೆಬಲ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಜೊತೆ ಸಂಪರ್ಕದಲ್ಲಿದ್ದ ಹಲವರನ್ನು ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕದಲ್ಲಿದ್ದವರ ಪಟ್ಟಿ ಮಾಡಿ ಅವರನ್ನೂ ಕ್ವಾರಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<p><strong>ಶಿವಾಜಿನಗರದಲ್ಲಿ ವಾಸ: </strong>ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಯ ಭದ್ರತಾ ವಿಭಾಗದಲ್ಲಿ ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದರು. ಶಿವಾಜಿನಗರದ ಪೊಲೀಸ್ ವಸತಿಗೃಹದಲ್ಲಿ ನೆಲೆಸಿದ್ದರು.</p>.<p>ಮುಖ್ಯ ಕಟ್ಟಡದಲ್ಲಿ ಡಿಜಿಪಿ ಪ್ರವೀಣ್ ಸೂದ್, ಎಡಿಜಿಪಿಗಳು ಹಾಗೂ ಹಲವು ಅಧಿಕಾರಿಗಳ ಕಚೇರಿಗಳು ಇವೆ. ಮುಖ್ಯ ಕಟ್ಟಡದ ಸಮೀಪದಲ್ಲೇ ಮತ್ತೊಂದು ಕಟ್ಟಡದಲ್ಲಿ ಭದ್ರತಾ ವಿಭಾಗದ ಕಚೇರಿ ಇದ್ದು, ಅಲ್ಲಿಯೇ ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದರು.</p>.<p>‘ಕಾನ್ಸ್ಟೆಬಲ್ ಅವರು ಮುಖ್ಯ ಕಟ್ಟಡಕ್ಕೆ ಬಂದಿರಲಿಲ್ಲ. ಹೀಗಾಗಿ ಯಾವುದೇ ಆತಂಕವಿಲ್ಲ. ಆದರೂ ಪೂರ್ತಿ ಕಟ್ಟಡ ಹಾಗೂ ಆವರಣವನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ’ ಎಂದು ಕಚೇರಿ ಅಧಿಕಾರಿಯೊಬ್ಬರು ಹೇಳಿದರು.</p>.<p>ಲಾಕ್ಡೌನ್ ಆದಾಗಿನಿಂದಲೂ ಪೊಲೀಸರು, ಯೋಧರಂತೆ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಇಬ್ಬರು ಕಾನ್ಸ್ಟೆಬಲ್ಗಳಿಗೂ ಸೋಂಕು ತಗುಲಿತ್ತು. ಈಗಾಗಲೇ ಒಬ್ಬರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೊಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/covid-coronavirus-pandemic-police-bengaluru-732018.html" target="_blank">ಕೊರೊನಾ ಸೋಂಕು: ಬೆಂಗಳೂರು ಸಂಚಾರ ಕಾನ್ಸ್ಟೆಬಲ್ ಗುಣಮುಖ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>