<p><strong>ಬೆಂಗಳೂರು</strong>: ‘ರಸ್ತೆ ಸಾರಿಗೆ ನಿಗಮಗಳಿಗೆ ಸದ್ಯ ಡೀಸೆಲ್ ಕೊರತೆಯ ಸಮಸ್ಯೆ ಇಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ತಕ್ಷಣಕ್ಕೆ ನಾಲ್ಕು ನಿಗಮಗಳಿಗೂ ಯಾವುದೇ ಸಮಸ್ಯೆ ಇಲ್ಲ. ಯುದ್ಧ ಹೀಗೆಯೇ ಮುಂದುವರಿದರೆ ಸಮಸ್ಯೆ ಆಗಬಹುದು’ ಎಂದರು.</p>.<p>ಮತ ಕೇಳುವ ಹಕ್ಕು ಬಿಜೆಪಿಗಿದೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮತ ಕೇಳುವ ಹಕ್ಕು ಬಿಜೆಪಿಗಿದೆ. ಈ ಕ್ಷೇತ್ರದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮುಸ್ಲಿಮರು ಬೇಡಿಕೆ ಇಟ್ಟಿದ್ದರು. ಆದರೆ, ಕೊಡಲು ಸಾಧ್ಯವಾಗಿಲ್ಲ. ಮುಂದೆ ರಾಜ್ಯಸಭೆ, ಪರಿಷತ್ ಸ್ಥಾನ ಕೊಡುವುದಾಗಿ ತಿಳಿಸಲಾಗಿದೆ’ ಎಂದರು.</p>.<p>‘ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಮುಸ್ಲಿಂ ಸಮುದಾಯದವರು ಬಿಜೆಪಿಗೆ ಮತ ಹಾಕುವುದಿಲ್ಲ. ಬಿಜೆಪಿ ನಾಯಕರು ಮುಸ್ಲಿಂ ಸಮುದಾಯದವರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆಂದು ಗೊತ್ತಿಲ್ಲವೇ? ಅವರೂ ನಮ್ಮ ದೇಶದ ಪ್ರಜೆಗಳು ಎನ್ನುವುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಸಮಾನತೆಯ ಹಕ್ಕು ಕೊಟ್ಟಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಸ್ತೆ ಸಾರಿಗೆ ನಿಗಮಗಳಿಗೆ ಸದ್ಯ ಡೀಸೆಲ್ ಕೊರತೆಯ ಸಮಸ್ಯೆ ಇಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ತಕ್ಷಣಕ್ಕೆ ನಾಲ್ಕು ನಿಗಮಗಳಿಗೂ ಯಾವುದೇ ಸಮಸ್ಯೆ ಇಲ್ಲ. ಯುದ್ಧ ಹೀಗೆಯೇ ಮುಂದುವರಿದರೆ ಸಮಸ್ಯೆ ಆಗಬಹುದು’ ಎಂದರು.</p>.<p>ಮತ ಕೇಳುವ ಹಕ್ಕು ಬಿಜೆಪಿಗಿದೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮತ ಕೇಳುವ ಹಕ್ಕು ಬಿಜೆಪಿಗಿದೆ. ಈ ಕ್ಷೇತ್ರದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮುಸ್ಲಿಮರು ಬೇಡಿಕೆ ಇಟ್ಟಿದ್ದರು. ಆದರೆ, ಕೊಡಲು ಸಾಧ್ಯವಾಗಿಲ್ಲ. ಮುಂದೆ ರಾಜ್ಯಸಭೆ, ಪರಿಷತ್ ಸ್ಥಾನ ಕೊಡುವುದಾಗಿ ತಿಳಿಸಲಾಗಿದೆ’ ಎಂದರು.</p>.<p>‘ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಮುಸ್ಲಿಂ ಸಮುದಾಯದವರು ಬಿಜೆಪಿಗೆ ಮತ ಹಾಕುವುದಿಲ್ಲ. ಬಿಜೆಪಿ ನಾಯಕರು ಮುಸ್ಲಿಂ ಸಮುದಾಯದವರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆಂದು ಗೊತ್ತಿಲ್ಲವೇ? ಅವರೂ ನಮ್ಮ ದೇಶದ ಪ್ರಜೆಗಳು ಎನ್ನುವುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಸಮಾನತೆಯ ಹಕ್ಕು ಕೊಟ್ಟಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>