‘ಈಗಾಗಲೇ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕಬ್ಬಿಣ, ಸಿಮೆಂಟ್, ತೈಲ ದರ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಹೆಸರಿನಲ್ಲಿ ಬಿಜೆಪಿಯವರು ‘ಡೈಲಿ ಪಿಕ್ ಪಾಕೆಟ್’ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಕೋಮು ಭಾವನೆ ಕೆರಳಿಸಿ ದೇಶ ಇಬ್ಭಾಗ ಮಾಡುತ್ತಿದ್ದಾರೆ. ಕೋಮುಭಾವನೆ ಕೆರಳಿಸಿ ಲಾಭ ಮಾಡಿಕೊಳ್ಳಬಹುದು ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಇಡೀ ನಮ್ಮ ವ್ಯವಸ್ಥೆ ನಾಶವಾಗುತ್ತಿದೆ. ಅನೇಕ ಜನ ಹೂಡಿಕೆದಾರರು ದೇಶ ಬಿಟ್ಟು ಹೋಗಿದ್ದಾರೆ. ಬರುವ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು’ ಎಂದು ಗುರುವಾರ ಸಂಜೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.