<p><strong>ಬೆಂಗಳೂರು</strong>: ರಾಜ್ಯದಲ್ಲಿ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತಲಾ ₹10 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಬರದ ಪರಿಸ್ಥಿತಿ ತೀವ್ರವಾಗಿದೆ. ಅದರ ಬಗ್ಗೆ ಲಕ್ಷ್ಯ ಕೊಡದ ಸಚಿವರು ಅಧಿಕಾರಕ್ಕಾಗಿ ನಿತ್ಯವೂ ದೆಹಲಿ ಪ್ರವಾಸ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯದ ಬಹುತೇಕ ಕಡೆ ನೀರಿಗಾಗಿ ಹಾಹಾಕಾರ ಹೆಚ್ಚಾಗಿದೆ. ಕುಡಿಯುವ ನೀರಿಗಾಗಿ ಸರ್ಕಾರದಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ಸಂಬಳ ಕಡಿತ ಮಾಡಲಾಗಿದೆ. ಕರ್ನಾಟಕಕ್ಕೂ ಅದೇ ಸ್ಥಿತಿ ಬರುವ ಲಕ್ಷಣ ಕಾಣುತ್ತಿದೆ’ ಎಂದು ಹೇಳಿದರು.</p>.<p>ಕೂಡಲೇ ಗೋಶಾಲೆಗಳನ್ನು ನಿರ್ಮಿಸಿ, ಜಾನುವಾರುಗಳಿಗೆ ಮೇವು ಪೂರೈಸಬೇಕು. ಹವಾಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಮಳೆ ಕಡಿಮೆ ಇರಲಿದೆ. ಬರದ ಸ್ಥಿತಿ ನಿರ್ವಹಣೆ ಮಾಡಲು ಆಗದಿದ್ದರೆ ಸಚಿವರು ದೆಹಲಿಯಲ್ಲೇ ಕೂರಲಿ ಬಿಡಿ ಎಂದರು.</p>.<div><blockquote>ಕಾಂಗ್ರೆಸ್ನ ನಾಯಕತ್ವ ಧಿಕ್ಕರಿಸಿ ಶಾಸಕರು ದೆಹಲಿಗೆ ಹೋಗುತ್ತಿದ್ದಾರೆ. ಇದರರ್ಥ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಮೂರು ಕಾಸಿನ ಬೆಲೆಯಿಲ್ಲ </blockquote><span class="attribution">ಆರ್.ಅಶೋಕ, ವಿರೋಧಪಕ್ಷದ ನಾಯಕ</span></div>.<p><strong>ಜನಿವಾರ ಪ್ರಕರಣ:</strong> ‘ಕೃಪಾನಿಧಿ ಕಾಲೇಜಿನಲ್ಲಿ ಜನಿವಾರ ಕಿತ್ತುಹಾಕಿರುವ ಪ್ರಕರಣ ನಡೆದಿದೆ. ಈ ಹಿಂದೆಯೂ ಅಲ್ಲಿ ಇಂತಹ ಘಟನೆ ನಡೆದಿತ್ತು. ಆಗಲೇ ಕಟ್ಟುನಿಟ್ಟಿನ ಆದೇಶ ಮಾಡಬೇಕಿತ್ತು. ಅದು ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ರುವವರೇ ಜನಿವಾರ ತೆಗೆಸಿರುವುದರ ವಿರುದ್ಧ ಮಾತನಾಡಿದ್ದಾರೆ. ಆದರೆ, ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ಕಾಂಗ್ರೆಸ್ ಇಂತಹ ಘಟನೆಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ’ ಎಂದು ಅಶೋಕ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತಲಾ ₹10 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಬರದ ಪರಿಸ್ಥಿತಿ ತೀವ್ರವಾಗಿದೆ. ಅದರ ಬಗ್ಗೆ ಲಕ್ಷ್ಯ ಕೊಡದ ಸಚಿವರು ಅಧಿಕಾರಕ್ಕಾಗಿ ನಿತ್ಯವೂ ದೆಹಲಿ ಪ್ರವಾಸ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯದ ಬಹುತೇಕ ಕಡೆ ನೀರಿಗಾಗಿ ಹಾಹಾಕಾರ ಹೆಚ್ಚಾಗಿದೆ. ಕುಡಿಯುವ ನೀರಿಗಾಗಿ ಸರ್ಕಾರದಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ಸಂಬಳ ಕಡಿತ ಮಾಡಲಾಗಿದೆ. ಕರ್ನಾಟಕಕ್ಕೂ ಅದೇ ಸ್ಥಿತಿ ಬರುವ ಲಕ್ಷಣ ಕಾಣುತ್ತಿದೆ’ ಎಂದು ಹೇಳಿದರು.</p>.<p>ಕೂಡಲೇ ಗೋಶಾಲೆಗಳನ್ನು ನಿರ್ಮಿಸಿ, ಜಾನುವಾರುಗಳಿಗೆ ಮೇವು ಪೂರೈಸಬೇಕು. ಹವಾಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಮಳೆ ಕಡಿಮೆ ಇರಲಿದೆ. ಬರದ ಸ್ಥಿತಿ ನಿರ್ವಹಣೆ ಮಾಡಲು ಆಗದಿದ್ದರೆ ಸಚಿವರು ದೆಹಲಿಯಲ್ಲೇ ಕೂರಲಿ ಬಿಡಿ ಎಂದರು.</p>.<div><blockquote>ಕಾಂಗ್ರೆಸ್ನ ನಾಯಕತ್ವ ಧಿಕ್ಕರಿಸಿ ಶಾಸಕರು ದೆಹಲಿಗೆ ಹೋಗುತ್ತಿದ್ದಾರೆ. ಇದರರ್ಥ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಮೂರು ಕಾಸಿನ ಬೆಲೆಯಿಲ್ಲ </blockquote><span class="attribution">ಆರ್.ಅಶೋಕ, ವಿರೋಧಪಕ್ಷದ ನಾಯಕ</span></div>.<p><strong>ಜನಿವಾರ ಪ್ರಕರಣ:</strong> ‘ಕೃಪಾನಿಧಿ ಕಾಲೇಜಿನಲ್ಲಿ ಜನಿವಾರ ಕಿತ್ತುಹಾಕಿರುವ ಪ್ರಕರಣ ನಡೆದಿದೆ. ಈ ಹಿಂದೆಯೂ ಅಲ್ಲಿ ಇಂತಹ ಘಟನೆ ನಡೆದಿತ್ತು. ಆಗಲೇ ಕಟ್ಟುನಿಟ್ಟಿನ ಆದೇಶ ಮಾಡಬೇಕಿತ್ತು. ಅದು ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ರುವವರೇ ಜನಿವಾರ ತೆಗೆಸಿರುವುದರ ವಿರುದ್ಧ ಮಾತನಾಡಿದ್ದಾರೆ. ಆದರೆ, ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ಕಾಂಗ್ರೆಸ್ ಇಂತಹ ಘಟನೆಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ’ ಎಂದು ಅಶೋಕ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>