<p><strong>ಬೆಂಗಳೂರು:</strong> ‘ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದಲ್ಲಿ ಬರ ಪರಿಹಾರ ನೀಡಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ಬರ ಪರಿಹಾರ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ. ನಾವು ಭಿಕ್ಷೆ ಕೇಳುತ್ತಿಲ್ಲ. ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬಳಿಕ ರಾಜ್ಯಕ್ಕೆ ₹ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಇದು ಕಡಿಮೆ ಮೊತ್ತ. ಬರ ಪರಿಹಾರ ವಿಚಾರದಲ್ಲಿ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ. ಅವರ ಜೊತೆಗೆ ಜೆಡಿಎಸ್ ಸೇರಿಕೊಂಡಿದೆ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.</p>.<p>ನಾಡದ್ರೋಹಿಗಳು-ಡಿಕೆಶಿ: ‘ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಸಿದ್ದರಾಮಯ್ಯ ಅಥವಾ ನನಗಾಗಲಿ ವೈಯಕ್ತಿಕವಾಗಿ ಕೇಳುತ್ತಿದ್ದೇವೆಯೇ? ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಕೊಟ್ಟಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.</p>.<p>‘ನಮ್ಮ ರಾಜ್ಯಕ್ಕೆ ಬಿಜೆಪಿ, ಜೆಡಿಎಸ್ನವರಷ್ಟು ದ್ರೋಹ ಯಾರೂ ಬಗೆದಿಲ್ಲ. ಎರಡೂ ಪಕ್ಷಗಳ ಮುಖಂಡರು ಈ ರಾಜ್ಯದ ದ್ರೋಹಿಗಳು. ರಾಜ್ಯದ ಹಿತಕ್ಕೆ ಒಮ್ಮೆಯೂ ದನಿ ಎತ್ತದವರು. ನಮ್ಮ ಹೋರಾಟ ನಿರಂತರ. ನಾವು ಈ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದರು.</p>.<p>ಕೇಂದ್ರದಿಂದ ಲಾಲಿಪಾಪ್: ‘ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ರಾಜ್ಯ ಸರ್ಕಾರ ಕೇಳಿದ ಪರಿಹಾರದ ಪೈಕಿ ಶೇ 20ರಷ್ಟನ್ನು ಕೇಂದ್ರ ಬಿಡುಗಡೆ ಮಾಡಿದೆ. ಈ ಲಾಲಿಪಾಪ್ ಅನ್ನು ಮೋದಿ ಕೊಟ್ಟಿದ್ದಾರೆ’ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.</p>.<p>ಸಚಿವರಾದ ಕೃಷ್ಣ ಬೈರೇಗೌಡ, ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿದ್ದರು.</p>.<p>ಕೇಂದ್ರದ ವಿರುದ್ಧ ಭಿತ್ತಿಪತ್ರ ಹಿಡಿದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ‘ಖಾಲಿ ಚೊಂಬು ಕೊಟ್ಟ ಬಿಜೆಪಿ, ಚೊಂಬೇಶ್ವರ ಮೋದಿ’, ‘ಗೋ ಬ್ಯಾಕ್ ಮೋದಿ ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದಲ್ಲಿ ಬರ ಪರಿಹಾರ ನೀಡಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ಬರ ಪರಿಹಾರ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ. ನಾವು ಭಿಕ್ಷೆ ಕೇಳುತ್ತಿಲ್ಲ. ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬಳಿಕ ರಾಜ್ಯಕ್ಕೆ ₹ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಇದು ಕಡಿಮೆ ಮೊತ್ತ. ಬರ ಪರಿಹಾರ ವಿಚಾರದಲ್ಲಿ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ. ಅವರ ಜೊತೆಗೆ ಜೆಡಿಎಸ್ ಸೇರಿಕೊಂಡಿದೆ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.</p>.<p>ನಾಡದ್ರೋಹಿಗಳು-ಡಿಕೆಶಿ: ‘ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಸಿದ್ದರಾಮಯ್ಯ ಅಥವಾ ನನಗಾಗಲಿ ವೈಯಕ್ತಿಕವಾಗಿ ಕೇಳುತ್ತಿದ್ದೇವೆಯೇ? ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಕೊಟ್ಟಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.</p>.<p>‘ನಮ್ಮ ರಾಜ್ಯಕ್ಕೆ ಬಿಜೆಪಿ, ಜೆಡಿಎಸ್ನವರಷ್ಟು ದ್ರೋಹ ಯಾರೂ ಬಗೆದಿಲ್ಲ. ಎರಡೂ ಪಕ್ಷಗಳ ಮುಖಂಡರು ಈ ರಾಜ್ಯದ ದ್ರೋಹಿಗಳು. ರಾಜ್ಯದ ಹಿತಕ್ಕೆ ಒಮ್ಮೆಯೂ ದನಿ ಎತ್ತದವರು. ನಮ್ಮ ಹೋರಾಟ ನಿರಂತರ. ನಾವು ಈ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದರು.</p>.<p>ಕೇಂದ್ರದಿಂದ ಲಾಲಿಪಾಪ್: ‘ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ರಾಜ್ಯ ಸರ್ಕಾರ ಕೇಳಿದ ಪರಿಹಾರದ ಪೈಕಿ ಶೇ 20ರಷ್ಟನ್ನು ಕೇಂದ್ರ ಬಿಡುಗಡೆ ಮಾಡಿದೆ. ಈ ಲಾಲಿಪಾಪ್ ಅನ್ನು ಮೋದಿ ಕೊಟ್ಟಿದ್ದಾರೆ’ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.</p>.<p>ಸಚಿವರಾದ ಕೃಷ್ಣ ಬೈರೇಗೌಡ, ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿದ್ದರು.</p>.<p>ಕೇಂದ್ರದ ವಿರುದ್ಧ ಭಿತ್ತಿಪತ್ರ ಹಿಡಿದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ‘ಖಾಲಿ ಚೊಂಬು ಕೊಟ್ಟ ಬಿಜೆಪಿ, ಚೊಂಬೇಶ್ವರ ಮೋದಿ’, ‘ಗೋ ಬ್ಯಾಕ್ ಮೋದಿ ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>