‘ಬರ ಪರಿಹಾರ ಜನರಿಗೆ ಈವರೆಗೂ ತಲುಪಿಲ್ಲ’ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಬರ ಪರಿಹಾರಕ್ಕೆ ಎಲ್ಲ ಜಿಲ್ಲಾಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗೆ ಸುಮಾರು ₹ 800 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಕುಡಿಯುವ ನೀರು, ಮೇವು ಸೇರಿದಂತೆ ಇತರ ಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುವುದು’ ಎಂದರು.