ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Published 22 ಮೇ 2023, 7:43 IST
Last Updated 22 ಮೇ 2023, 7:43 IST
ಅಕ್ಷರ ಗಾತ್ರ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಇದೇ ವೇಳೆ ಮಾಜಿ ಸಚಿವರಾದ ಆರ್‌.ಅಶೋಕ, ಆರಗ ಜ್ಞಾನೇಂದ್ರ, ಮುನಿರತ್ನ, ಬೈರತಿ ಬಸವರಾಜು, ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವು ಬಿಜೆಪಿ ಶಾಸಕರು ಉಪಸ್ಥಿತರಿದ್ದರು. ಈ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದ್ದಾರೆ.

ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಉಪ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT