<p><strong>ವಿಜಯಪುರ:</strong> ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಹೇಳಿದರು.</p>.<p>ಮಹಾಶಿವರಾತ್ರಿ ಅಂಗವಾಗಿ ನಗರದ 770 ಲಿಂಗದ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ನನ್ನ ಪರಿವ್ಯಾಪ್ತಿಯಲ್ಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಸೇರಿ ಈ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ. ಎಲ್ಲರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ಟಿಕೆಟ್ ನೀಡಲಾಗುವುದು ಎಂದರು.</p>.<p>ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಒಂದು ಕಡೆಯಾದರೆ, ಕಾಂಗ್ರೆಸ್ ಮತ್ತು ಕರ್ನಾಟಕದ ಜನತೆ ಒಂದು ಕಡೆಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರಾನೇರ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯದ ಭ್ರಷ್ಟಾಸುರ ಸರ್ಕಾರವನ್ನು ಜನತೆ ಕಿತ್ತೆಸೆಯಲಿದ್ದಾರೆ ಎಂದು ಹೇಳಿದರು. </p>.<p>ಕಾಂಗ್ರೆಸ್ಸಿಗೆ ಪಕ್ಷದ ಶಕ್ತಿಯ ಜೊತೆಗೆ ಜನರ ಬೆಂಬಲವಿರುವುದು ಪ್ಲಸ್ ಪಾಯಿಂಟ್ ಆಗಿದೆ. ಮತದಾರರು ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.</p>.<p>ಡಾ. ಜಿ. ಪರಮೇಶ್ವರ ಅವರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ನಮ್ಮ ಪರಿವಾರದ ಹಿರಿಯ ಸದಸ್ಯರಾಗಿದ್ದಾರೆ. ಅಷ್ಟೇ ಅಲ್ಲ, ಚುನಾವಣೆ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಇಲ್ಲಿ ಅಧಿಕಾರಕ್ಕಾಗಿ ಜಗಳ ನಡೆಯುತ್ತಿಲ್ಲ ಎಂದರು.</p>.<p>ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಒದಗಿಸಲು, ಪ್ರತಿಯೊಬ್ಬ ಮಹಿಳೆಯರಿಗೆ ₹ 2 ಸಾವಿರ ಮಾಸಾಶನ ನೀಡುವುದು, ರೈತರು, ಬಡವರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರಿಗೆ ನ್ಯಾಯ ಒದಗಿಸುವುದು ಇಲ್ಲಿ ಪ್ರಮುಖವಾಗಿದ್ದು, ದೇಶದ ಹಿತ ನಮಗೆ ಮುಖ್ಯವಾಗಿದೆ ಎಂದು ಅವರು ಹೇಳಿದರು.</p>.<p>ರಾಜಕೀಯದಲ್ಲಿ ಆಸೆ ಮತ್ತು ಆಕಾಂಕ್ಷೆಗಳಿರುವುದು ಸಹಜ. ಅದನ್ನು ಬಂಡಾಯ ಎನ್ನುವುದು ಸರಿಯಲ್ಲ. ವಿಶ್ವದಲ್ಲಿ ರಾಜ್ಯವನ್ನು ಬ್ರ್ಯಾಂಡ್ ಕರ್ನಾಟಕ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದರು.</p>.<p><u><strong>ಕೈಜೋಡಿಸಿ:</strong></u></p>.<p>ಮಹಾಶಿವರಾತ್ರಿಯಂದು ಎಲ್ಲ ದುಷ್ಟ ಶಕ್ತಿಗಳನ್ನು ತೊಲಗಿಸಲು ಸಂಕಲ್ಪ ಮಾಡಬೇಕು ಎಂದು ಶಿವ ಹೇಳುತ್ತಾರೆ. ಅದರಂತೆ ರಾಜ್ಯದ ಜನರ ಪಾಲಿಗೆ ಶಾಪವಾಗಿರುವ ಬೊಮ್ಮಾಯಿ ನೇತೃತ್ವದ ಸರ್ಕಾರ ತೊಲಗಬೇಕು. ಶೇ 40 ಕಮಿಷನ್ ಸರ್ಕಾರ, ನೌಕರಿಗಳ ಮಾರಾಟ ಮಾಡುವ ಸರ್ಕಾರ, ಎಲ್ಲ ಕಡೆ ಬೆಲೆ ಏರಿಕೆ, ದಲಿತ, ಆದಿವಾಸಿ, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರಿಗೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಈ ಸರ್ಕಾರ ತೊಲಗಬೇಕಿದೆ. ಶಿವನ ಹೇಳಿಕೆಯಂತೆ ಕೆಟ್ಟ ವಿಚಾರಗಳು ತಲೆಯನ್ನು ಮೀರಿ ಬೆಳೆದರೆ ಅದರ ಅಂತ್ಯ ಮಾಡಬೇಕು. ಈಗ ಕಲಿಯುಗದಲ್ಲಿ ಮತ ಹಾಕುವ ಮೂಲಕ ಅದಕ್ಕೆ ಅಂತ್ಯ ಹಾಡಬೇಕು. ಯಾವುದೇ ಜಾತಿ ಮತ್ತು ಪಂಥಗಳ ಜನರು ಮತದಾನ ಮಾಡುವ ಮೂಲಕ ರಾಜ್ಯದ ಕೆಟ್ಟ ಸರ್ಕಾರವನ್ನು ತೊಲಗಿಸಲು ಕೈಜೊಡಿಸಬೇಕು ಎಂದು ಮನವಿ ಮಾಡಿದರು.</p>.<p>ಬಳಿಕ ಬಂಥನಾಳ ಶಿವಯೋಗಿಗಳ ದೇವಸ್ಥಾನಕ್ಕೂ ರಣದೀಪಸಿಂಗ್ ಸುರ್ಜೆವಾಲಾ ಭೇಟಿ ನೀಡಿ ದರ್ಶನ ಪಡೆದರು. </p>.<p>ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಸೋಮನಾಥ ಕಳ್ಳಿಮನಿ, ಶರಣಪ್ಪ ಸುಣಗಾರ, ಶ್ರೀನಾಥ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಹೇಳಿದರು.</p>.<p>ಮಹಾಶಿವರಾತ್ರಿ ಅಂಗವಾಗಿ ನಗರದ 770 ಲಿಂಗದ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ನನ್ನ ಪರಿವ್ಯಾಪ್ತಿಯಲ್ಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಸೇರಿ ಈ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ. ಎಲ್ಲರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ಟಿಕೆಟ್ ನೀಡಲಾಗುವುದು ಎಂದರು.</p>.<p>ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಒಂದು ಕಡೆಯಾದರೆ, ಕಾಂಗ್ರೆಸ್ ಮತ್ತು ಕರ್ನಾಟಕದ ಜನತೆ ಒಂದು ಕಡೆಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರಾನೇರ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯದ ಭ್ರಷ್ಟಾಸುರ ಸರ್ಕಾರವನ್ನು ಜನತೆ ಕಿತ್ತೆಸೆಯಲಿದ್ದಾರೆ ಎಂದು ಹೇಳಿದರು. </p>.<p>ಕಾಂಗ್ರೆಸ್ಸಿಗೆ ಪಕ್ಷದ ಶಕ್ತಿಯ ಜೊತೆಗೆ ಜನರ ಬೆಂಬಲವಿರುವುದು ಪ್ಲಸ್ ಪಾಯಿಂಟ್ ಆಗಿದೆ. ಮತದಾರರು ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.</p>.<p>ಡಾ. ಜಿ. ಪರಮೇಶ್ವರ ಅವರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ನಮ್ಮ ಪರಿವಾರದ ಹಿರಿಯ ಸದಸ್ಯರಾಗಿದ್ದಾರೆ. ಅಷ್ಟೇ ಅಲ್ಲ, ಚುನಾವಣೆ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಇಲ್ಲಿ ಅಧಿಕಾರಕ್ಕಾಗಿ ಜಗಳ ನಡೆಯುತ್ತಿಲ್ಲ ಎಂದರು.</p>.<p>ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಒದಗಿಸಲು, ಪ್ರತಿಯೊಬ್ಬ ಮಹಿಳೆಯರಿಗೆ ₹ 2 ಸಾವಿರ ಮಾಸಾಶನ ನೀಡುವುದು, ರೈತರು, ಬಡವರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರಿಗೆ ನ್ಯಾಯ ಒದಗಿಸುವುದು ಇಲ್ಲಿ ಪ್ರಮುಖವಾಗಿದ್ದು, ದೇಶದ ಹಿತ ನಮಗೆ ಮುಖ್ಯವಾಗಿದೆ ಎಂದು ಅವರು ಹೇಳಿದರು.</p>.<p>ರಾಜಕೀಯದಲ್ಲಿ ಆಸೆ ಮತ್ತು ಆಕಾಂಕ್ಷೆಗಳಿರುವುದು ಸಹಜ. ಅದನ್ನು ಬಂಡಾಯ ಎನ್ನುವುದು ಸರಿಯಲ್ಲ. ವಿಶ್ವದಲ್ಲಿ ರಾಜ್ಯವನ್ನು ಬ್ರ್ಯಾಂಡ್ ಕರ್ನಾಟಕ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದರು.</p>.<p><u><strong>ಕೈಜೋಡಿಸಿ:</strong></u></p>.<p>ಮಹಾಶಿವರಾತ್ರಿಯಂದು ಎಲ್ಲ ದುಷ್ಟ ಶಕ್ತಿಗಳನ್ನು ತೊಲಗಿಸಲು ಸಂಕಲ್ಪ ಮಾಡಬೇಕು ಎಂದು ಶಿವ ಹೇಳುತ್ತಾರೆ. ಅದರಂತೆ ರಾಜ್ಯದ ಜನರ ಪಾಲಿಗೆ ಶಾಪವಾಗಿರುವ ಬೊಮ್ಮಾಯಿ ನೇತೃತ್ವದ ಸರ್ಕಾರ ತೊಲಗಬೇಕು. ಶೇ 40 ಕಮಿಷನ್ ಸರ್ಕಾರ, ನೌಕರಿಗಳ ಮಾರಾಟ ಮಾಡುವ ಸರ್ಕಾರ, ಎಲ್ಲ ಕಡೆ ಬೆಲೆ ಏರಿಕೆ, ದಲಿತ, ಆದಿವಾಸಿ, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರಿಗೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಈ ಸರ್ಕಾರ ತೊಲಗಬೇಕಿದೆ. ಶಿವನ ಹೇಳಿಕೆಯಂತೆ ಕೆಟ್ಟ ವಿಚಾರಗಳು ತಲೆಯನ್ನು ಮೀರಿ ಬೆಳೆದರೆ ಅದರ ಅಂತ್ಯ ಮಾಡಬೇಕು. ಈಗ ಕಲಿಯುಗದಲ್ಲಿ ಮತ ಹಾಕುವ ಮೂಲಕ ಅದಕ್ಕೆ ಅಂತ್ಯ ಹಾಡಬೇಕು. ಯಾವುದೇ ಜಾತಿ ಮತ್ತು ಪಂಥಗಳ ಜನರು ಮತದಾನ ಮಾಡುವ ಮೂಲಕ ರಾಜ್ಯದ ಕೆಟ್ಟ ಸರ್ಕಾರವನ್ನು ತೊಲಗಿಸಲು ಕೈಜೊಡಿಸಬೇಕು ಎಂದು ಮನವಿ ಮಾಡಿದರು.</p>.<p>ಬಳಿಕ ಬಂಥನಾಳ ಶಿವಯೋಗಿಗಳ ದೇವಸ್ಥಾನಕ್ಕೂ ರಣದೀಪಸಿಂಗ್ ಸುರ್ಜೆವಾಲಾ ಭೇಟಿ ನೀಡಿ ದರ್ಶನ ಪಡೆದರು. </p>.<p>ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಸೋಮನಾಥ ಕಳ್ಳಿಮನಿ, ಶರಣಪ್ಪ ಸುಣಗಾರ, ಶ್ರೀನಾಥ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>