ಮೊದಲಿಗೆ ಅಂದರೆ 1985ರಲ್ಲಿ ಜನತಾ ಪಕ್ಷದಿಂದ ಗೆದ್ದಿದ್ದರು. 1994ರಲ್ಲಿ ಜನತಾ ದಳದಿಂದ, 2004ರಲ್ಲಿ ಜೆಡಿಎಸ್ನಿಂದ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದವರು. ಅಹಿಂದ ಸಂಘಟನೆಗೆ ಮುಂದಾದ ಸಿದ್ದರಾಮಯ್ಯ ಅವರ ಜೊತೆಗೆ ನಿಂತು ಕೈ ಬಲಪಡಿಸಿದ ಕೆ.ವೆಂಕಟೇಶ್ ಹಳೆ ಮೈಸೂರು ಭಾಗದ ಒಕ್ಕಲಿಗ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.