‘ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದಡಿ.ಕೆ. ಸುರೇಶ್ ಕೂಡಾ ರಾಜ್ಯ ರಾಜಕಾರಣಕ್ಕೆ ಕಾಲಿಡುವ ಮನಸ್ಸು ಹೊಂದಿದ್ದರು. ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆಯನ್ನು ತಮ್ಮ ಆಪ್ತರ ಜೊತೆ ಹಂಚಿಕೊಂಡಿದ್ದರು. ಆದರೆ, ಸುರೇಶ್ ದೆಹಲಿ ಮಟ್ಟದಲ್ಲಿಯೇ ಉಳಿದುಕೊಳ್ಳಲಿ ಎಂಬ ತೀರ್ಮಾನಕ್ಕೆ ಅವರ ಅಣ್ಣನೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಂದಿದ್ದಾರೆ’ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.