ರೇವಣ್ಣ ಕುಟುಂಬ ಹಾಗೂ ಕುಮಾರಸ್ವಾಮಿ ಅವರಿಗೆ ಹಾಸನ ಕ್ಷೇತ್ರದ ಟಿಕೆಟ್ ಪ್ರತಿಷ್ಠೆಯ ಪ್ರಶ್ನೆಯಾಗಿಯೂ ಮಾರ್ಪಟ್ಟಿದೆ. ಅಂತಿಮವಾಗಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಕೇಳಿ ಅಭ್ಯರ್ಥಿ ಆಯ್ಕೆ ಮಾಡಲು ಮುಂದಾಗಿದ್ದ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಭಾನುವಾರ ಸಭೆಯನ್ನೂ ಕರೆದಿದ್ದರು. ತಮ್ಮನ್ನು ಹೊರಗಿಟ್ಟು ಸಭೆ ನಡೆಸಿದರೆ, ಜಿಲ್ಲೆಯ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗಲಿದೆ ಎನ್ನುವ ಕಾರಣಕ್ಕೆ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದರು. ಅಂತಿಮವಾಗಿ ದೇವೇಗೌಡರೇ ಮಧ್ಯ ಪ್ರವೇಶಿಸಿ, ಬೆಂಗಳೂರಿನಲ್ಲಿ ಕರೆದಿದ್ದ ಸಭೆಯನ್ನು ರದ್ದುಪಡಿಸಿದ್ದಾರೆ.