ಮಾಜಿ ಶಾಸಕ ಬಿ.ವಿ.ಕರೀಗೌಡ ಮಾತನಾಡಿ, ‘ಶಾಸಕ ಪ್ರೀತಂ ಗೌಡ ಹಾಕಿರುವ ಸವಾಲನ್ನು ಸ್ವೀಕರಿಸಲು ಭವಾನಿ ಅವರೇ ಸೂಕ್ತ. ಶಾಸಕರು ಪಂಥಾಹ್ವಾನ ನೀಡದಿದ್ದರೆ, ರೇವಣ್ಣ ಕುಟುಂಬದವರು ಹಾಸನಕ್ಕೆ ಬರುವ ಪ್ರಶ್ನೆಯೇ ಇರುತ್ತಿರಲಿಲ್ಲ’ ಎಂದಿದ್ದಾರೆ. ಶಾಸಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ, ‘ನಮ್ಮ ಕುಟುಂಬಕ್ಕೆ ಪಂಥಾಹ್ವಾನ ನೀಡಿದ್ದಾರೆ. ನಮ್ಮ ತಾಯಿಯ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ನಮಗೆ ಶಕ್ತಿ ಇಲ್ಲವೇ?’ ಎಂದು ಕೇಳಿದ್ದಾರೆ.