<p>ಉಗ್ರ ಹಂಝಾ ಹತ್ಯೆ, ಕಾಂಗ್ರೆಸ್ ಪ್ರತಿಭಟನೆ ಸೇರಿ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.. ಓದಿ ಆನಂದಿಸಿ..</p>.<p><strong>ನವದೆಹಲಿ:</strong> ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಹಂಝಾ ಬುರ್ಹಾನ್ನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಅಪರಿಚಿತರು ಹತ್ಯೆ ಮಾಡಿದ್ದಾರೆ. ಭಾರತಕ್ಕೆ ಬೇಕಾಗಿರುವ ಕುಖ್ಯಾತ ಉಗ್ರರನ್ನು ಪಾಕಿಸ್ತಾನದಲ್ಲಿ ಸರಣಿ ರೂಪದಲ್ಲಿ ಹತ್ಯೆ ಮಾಡುತ್ತಿರುವ ಅಪರಿಚಿತ ವ್ಯಕ್ತಿಗಳು ಮತ್ತೊಮ್ಮೆ ಕಾರ್ಯಾಚರಣೆ ನಡೆಸಿದ್ದು ಮುಜಾಫರಾಬಾದ್ನಲ್ಲಿ ಹಂಝಾನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.</p>.ಪುಲ್ವಾಮಾ ದಾಳಿ ದಿನ ಏನೆಲ್ಲಾ ಆಗಿತ್ತು? ಹುತಾತ್ಮರಿಗೆ ಪಿಎಂ, ಉಪರಾಷ್ಟ್ರಪತಿ ನಮನ.<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆ ಕಾಡಿಗೆ ಗುರುವಾರ ತೆರಳಿದ್ದಾರೆ.</p>.ಧರ್ಮಸ್ಥಳ: ಹೊಸ ಸ್ಥಳದಲ್ಲಿ ಶೋಧ; ಬೋಳಿಯಾರ್ನ ಕಾಡಿಗೆ ತೆರಳಿದ ಎಸ್ಐಟಿ ತಂಡ.<p>ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ವಿಸ್ತರಿಸಲು ಒತ್ತು ನೀಡುವುದಾಗಿ ಗೂಗಲ್ ಘೋಷಿಸಿದೆ. ಆ ನಿಟ್ಟಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಡಿಜಿಟಲ್ ಕಲಿಕಾ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದೆ. ತರಗತಿಗಳಲ್ಲಿ ಎಐ ಸಾಕ್ಷರತೆಯನ್ನು ಹೆಚ್ಚಿಸಲು ಗೂಗಲ್ ಪ್ರಯತ್ನಿಸಲಿದೆ ಎಂದು ಲಂಡನ್ನಲ್ಲಿ ನಡೆದ ಎಜುಕೇಶನ್ ವರ್ಲ್ಡ್ ಫೋರಂ ಸಂದರ್ಭದಲ್ಲಿ ಘೋಷಣೆ ಮಾಡಿದೆ.</p>.ಗೂಗಲ್ CEO ಸುಂದರ್ ಪಿಚೈ ಭೇಟಿಯಾದ ಮೋದಿ: ಭಾರತದ ಡಿಜಿಟಲ್ ರೂಪಾಂತರ ಕುರಿತು ಚರ್ಚೆ.<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಜೀರ್ಣೋದ್ಧಾರಗೊಂಡಿರುವ ಮಧ್ಯರಂಗನಾಥ ಸ್ವಾಮಿ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಮಾತನಾಡಿ, ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ದೊರೆತ ಬಳಿಕ ಭೂಮಿ ಪೂಜೆ ಮಾಡಲಾಗುವುದು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲಾಗುವುದು ಎಂದರು.</p>.ಹತ್ತು ದಿನದಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್: ಡಿ.ಕೆ. ಶಿವಕುಮಾರ್.<p><strong>ನವದೆಹಲಿ:</strong> ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ವಿಮಾನದ ಹಿಂಭಾಗ ರನ್ವೇಗೆ ಬಡಿದಿದ್ದು, ಭಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏರ್ ಇಂಡಿಯಾದ AI2651 ವಿಮಾನದಲ್ಲಿ 181 ಪ್ರಯಾಣಿಕರು ಇದ್ದರು.</p>.ಲ್ಯಾಂಡಿಂಗ್ ವೇಳೆ ಏರ್ ಕೆನಡಾ ವಿಮಾನದಲ್ಲಿ ಬೆಂಕಿ; ತಪ್ಪಿದ ಮತ್ತೊಂದು ಅವಘಡ.<p><strong>ತಿರುವನಂತಪುರ:</strong> ಕೇರಳಂ ವಿಧಾನಸಭೆಯಲ್ಲಿ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೇರಳಂ ವಿಧಾನಸಭೆಯ ಅಧಿವೇಶನ ಗುರುವಾರದಿಂದ ಆರಂಭಗೊಂಡಿದ್ದು, ನೂತನ ಶಾಸಕರನ್ನು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.</p>.ಕೇರಳ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್.<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಎಲ್ಲ ಮದರಸಾಗಳಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಪ್ರಾರ್ಥನಾ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಲೆಗಳು ಆರಂಭವಾಗುವ ಮುನ್ನ ನಡೆಯುವ ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಇಂದಿನಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.</p>.‘ವಂದೇ ಮಾತರಂ’ನ ಎಲ್ಲ 6 ಚರಣ ಹಾಡುವುದು ಕಡ್ಡಾಯ: ಕೇಂದ್ರ.<p><strong>ಚಿಕ್ಕಮಗಳೂರು:</strong> ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು. ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ. ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.</p>.ಚಿಕ್ಕಮಗಳೂರು DCC ಬ್ಯಾಂಕ್: CT ರವಿ, ಭೋಜೇಗೌಡ ಗೆಲುವು, ಕಾಂಗ್ರೆಸ್ ಶಾಸಕಗೆ ಸೋಲು.<p><strong>ಬೆಂಗಳೂರು</strong>: ಇಟಲಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಆ ದೇಶದ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಟಾಫಿ ಚಾಕೊಲೆಟ್ ಪೊಟ್ಟಣವನ್ನು ಉಡುಗೊರೆಯಾಗಿ ನೀಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದೀಗ, ಇದೇ ವಿಷಯವನ್ನು ಇಟ್ಟುಕೊಂಡು ವಿಪಕ್ಷಗಳು ಮೋದಿಯವರನ್ನು ವ್ಯಂಗ್ಯ ಮಾಡುತ್ತಿವೆ.</p>.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಮೋದಿ, ಶಾ ಸಿದ್ಧತೆ: ಪ್ರಿಯಾಂಕ್ ಖರ್ಗೆ.<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸಂಪುಟ ವಿಸ್ತರಿಸಿದ್ದು, ಕಾಂಗ್ರೆಸ್ನ ಇಬ್ಬರು ಸೇರಿದಂತೆ ಒಟ್ಟು 23 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಶಾಸಕರು ತಮಿಳುನಾಡಿನಲ್ಲಿ ಸುಮಾರು 59 ವರ್ಷಗಳ ನಂತರ ಸಂಪುಟ ಸೇರಿದಂತಾಗಿದೆ.</p>.ವಿಜಯ್ ಸಂಪುಟ ವಿಸ್ತರಣೆ: AIADMK ಬಂಡಾಯ ಶಾಸಕರಿಗೆ ‘NO’ ಎಂದ ಎಡಪಕ್ಷಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಗ್ರ ಹಂಝಾ ಹತ್ಯೆ, ಕಾಂಗ್ರೆಸ್ ಪ್ರತಿಭಟನೆ ಸೇರಿ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.. ಓದಿ ಆನಂದಿಸಿ..</p>.<p><strong>ನವದೆಹಲಿ:</strong> ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಹಂಝಾ ಬುರ್ಹಾನ್ನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಅಪರಿಚಿತರು ಹತ್ಯೆ ಮಾಡಿದ್ದಾರೆ. ಭಾರತಕ್ಕೆ ಬೇಕಾಗಿರುವ ಕುಖ್ಯಾತ ಉಗ್ರರನ್ನು ಪಾಕಿಸ್ತಾನದಲ್ಲಿ ಸರಣಿ ರೂಪದಲ್ಲಿ ಹತ್ಯೆ ಮಾಡುತ್ತಿರುವ ಅಪರಿಚಿತ ವ್ಯಕ್ತಿಗಳು ಮತ್ತೊಮ್ಮೆ ಕಾರ್ಯಾಚರಣೆ ನಡೆಸಿದ್ದು ಮುಜಾಫರಾಬಾದ್ನಲ್ಲಿ ಹಂಝಾನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.</p>.ಪುಲ್ವಾಮಾ ದಾಳಿ ದಿನ ಏನೆಲ್ಲಾ ಆಗಿತ್ತು? ಹುತಾತ್ಮರಿಗೆ ಪಿಎಂ, ಉಪರಾಷ್ಟ್ರಪತಿ ನಮನ.<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆ ಕಾಡಿಗೆ ಗುರುವಾರ ತೆರಳಿದ್ದಾರೆ.</p>.ಧರ್ಮಸ್ಥಳ: ಹೊಸ ಸ್ಥಳದಲ್ಲಿ ಶೋಧ; ಬೋಳಿಯಾರ್ನ ಕಾಡಿಗೆ ತೆರಳಿದ ಎಸ್ಐಟಿ ತಂಡ.<p>ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ವಿಸ್ತರಿಸಲು ಒತ್ತು ನೀಡುವುದಾಗಿ ಗೂಗಲ್ ಘೋಷಿಸಿದೆ. ಆ ನಿಟ್ಟಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಡಿಜಿಟಲ್ ಕಲಿಕಾ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದೆ. ತರಗತಿಗಳಲ್ಲಿ ಎಐ ಸಾಕ್ಷರತೆಯನ್ನು ಹೆಚ್ಚಿಸಲು ಗೂಗಲ್ ಪ್ರಯತ್ನಿಸಲಿದೆ ಎಂದು ಲಂಡನ್ನಲ್ಲಿ ನಡೆದ ಎಜುಕೇಶನ್ ವರ್ಲ್ಡ್ ಫೋರಂ ಸಂದರ್ಭದಲ್ಲಿ ಘೋಷಣೆ ಮಾಡಿದೆ.</p>.ಗೂಗಲ್ CEO ಸುಂದರ್ ಪಿಚೈ ಭೇಟಿಯಾದ ಮೋದಿ: ಭಾರತದ ಡಿಜಿಟಲ್ ರೂಪಾಂತರ ಕುರಿತು ಚರ್ಚೆ.<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಜೀರ್ಣೋದ್ಧಾರಗೊಂಡಿರುವ ಮಧ್ಯರಂಗನಾಥ ಸ್ವಾಮಿ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಮಾತನಾಡಿ, ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ದೊರೆತ ಬಳಿಕ ಭೂಮಿ ಪೂಜೆ ಮಾಡಲಾಗುವುದು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲಾಗುವುದು ಎಂದರು.</p>.ಹತ್ತು ದಿನದಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್: ಡಿ.ಕೆ. ಶಿವಕುಮಾರ್.<p><strong>ನವದೆಹಲಿ:</strong> ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ವಿಮಾನದ ಹಿಂಭಾಗ ರನ್ವೇಗೆ ಬಡಿದಿದ್ದು, ಭಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏರ್ ಇಂಡಿಯಾದ AI2651 ವಿಮಾನದಲ್ಲಿ 181 ಪ್ರಯಾಣಿಕರು ಇದ್ದರು.</p>.ಲ್ಯಾಂಡಿಂಗ್ ವೇಳೆ ಏರ್ ಕೆನಡಾ ವಿಮಾನದಲ್ಲಿ ಬೆಂಕಿ; ತಪ್ಪಿದ ಮತ್ತೊಂದು ಅವಘಡ.<p><strong>ತಿರುವನಂತಪುರ:</strong> ಕೇರಳಂ ವಿಧಾನಸಭೆಯಲ್ಲಿ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೇರಳಂ ವಿಧಾನಸಭೆಯ ಅಧಿವೇಶನ ಗುರುವಾರದಿಂದ ಆರಂಭಗೊಂಡಿದ್ದು, ನೂತನ ಶಾಸಕರನ್ನು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.</p>.ಕೇರಳ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್.<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಎಲ್ಲ ಮದರಸಾಗಳಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಪ್ರಾರ್ಥನಾ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಲೆಗಳು ಆರಂಭವಾಗುವ ಮುನ್ನ ನಡೆಯುವ ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಇಂದಿನಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.</p>.‘ವಂದೇ ಮಾತರಂ’ನ ಎಲ್ಲ 6 ಚರಣ ಹಾಡುವುದು ಕಡ್ಡಾಯ: ಕೇಂದ್ರ.<p><strong>ಚಿಕ್ಕಮಗಳೂರು:</strong> ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು. ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ. ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.</p>.ಚಿಕ್ಕಮಗಳೂರು DCC ಬ್ಯಾಂಕ್: CT ರವಿ, ಭೋಜೇಗೌಡ ಗೆಲುವು, ಕಾಂಗ್ರೆಸ್ ಶಾಸಕಗೆ ಸೋಲು.<p><strong>ಬೆಂಗಳೂರು</strong>: ಇಟಲಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಆ ದೇಶದ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಟಾಫಿ ಚಾಕೊಲೆಟ್ ಪೊಟ್ಟಣವನ್ನು ಉಡುಗೊರೆಯಾಗಿ ನೀಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದೀಗ, ಇದೇ ವಿಷಯವನ್ನು ಇಟ್ಟುಕೊಂಡು ವಿಪಕ್ಷಗಳು ಮೋದಿಯವರನ್ನು ವ್ಯಂಗ್ಯ ಮಾಡುತ್ತಿವೆ.</p>.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಮೋದಿ, ಶಾ ಸಿದ್ಧತೆ: ಪ್ರಿಯಾಂಕ್ ಖರ್ಗೆ.<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸಂಪುಟ ವಿಸ್ತರಿಸಿದ್ದು, ಕಾಂಗ್ರೆಸ್ನ ಇಬ್ಬರು ಸೇರಿದಂತೆ ಒಟ್ಟು 23 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಶಾಸಕರು ತಮಿಳುನಾಡಿನಲ್ಲಿ ಸುಮಾರು 59 ವರ್ಷಗಳ ನಂತರ ಸಂಪುಟ ಸೇರಿದಂತಾಗಿದೆ.</p>.ವಿಜಯ್ ಸಂಪುಟ ವಿಸ್ತರಣೆ: AIADMK ಬಂಡಾಯ ಶಾಸಕರಿಗೆ ‘NO’ ಎಂದ ಎಡಪಕ್ಷಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>