<p><strong>ನವದೆಹಲಿ:</strong> ದೇಶದಲ್ಲಿ 2024ರಲ್ಲಿ ರೈತರು ಹಾಗೂ ಕೃಷಿ ಕಾರ್ಮಿಕರ ಆತ್ಮಹತ್ಯೆಗಳು ಸ್ವಲ್ಪ ಕಡಿಮೆಯಾಗಿವೆ. ಆದರೆ, ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 22.61ರಷ್ಟು ಹೆಚ್ಚಳ ಆಗಿದೆ ಎಂದು ‘ಭಾರತದಲ್ಲಿ ಅಪಘಾತದ ಸಾವುಗಳು ಹಾಗೂ ಆತ್ಮಹತ್ಯೆಗಳು–2024’ ವರದಿ ತಿಳಿಸಿದೆ. </p>.<p>ಬುಧವಾರ ಪ್ರಕಟವಾದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (ಎನ್ಸಿಆರ್ಬಿ) ವರದಿ ಪ್ರಕಾರ, ದೇಶದಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿರುವ 10,546 ಮಂದಿ 2024ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ ಈ ಸಂಖ್ಯೆ 10,786 ಆಗಿತ್ತು. ದೇಶದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 2.22ರಷ್ಟು ಕಡಿಮೆ ಆಗಿದೆ. ಆದರೆ, ಕರ್ನಾಟಕದಲ್ಲಿ ಈ ಸಂಖ್ಯೆ 2,423ರಿಂದ 2,971ಕ್ಕೆ ಏರಿಕೆ ಆಗಿದೆ.</p>.<p>ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಅನ್ನದಾತರ ಆತ್ಮಹತ್ಯೆಯಲ್ಲಿ ಮೊದಲ ಐದು ಸ್ಥಾನದಲ್ಲಿರುವ ರಾಜ್ಯಗಳ ಪೈಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ 2024ರಲ್ಲಿ ಈ ಸಂಖ್ಯೆ ಜಾಸ್ತಿ ಆಗಿದೆ. ರಾಜ್ಯದಲ್ಲಿ 2023ರಲ್ಲಿ 1,425 ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024ರಲ್ಲಿ 1,770 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 1,201 ಕೃಷಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. </p>.<p>ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಆತ್ಮಹತ್ಯೆ ಪ್ರಮಾಣ ಅಲ್ಪ ಇಳಿಕೆ ಆಗಿದ್ದರೆ, ಛತ್ತೀಸಗಢ, ಗುಜರಾತ್, ರಾಜಸ್ಥಾನ ಹಾಗೂ ಪುದುಚೆರಿಯಲ್ಲಿ ಸ್ವಲ್ಪ ಏರಿಕೆ ಆಗಿದೆ. ರೈತರ ಆತ್ಮಹತ್ಯೆಗೆ ಕಾರಣಗಳನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ. </p>.<p>ಆತ್ಮಹತ್ಯೆ ಮಾಡಿಕೊಂಡ 4,633 ರೈತರಲ್ಲಿ 4,134 ಜನರು ತಮ್ಮ ಸ್ವಂತ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರೆ, 499 ಜನರು ಗುತ್ತಿಗೆಗೆ ಭೂಮಿಯನ್ನು ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ 2024ರಲ್ಲಿ ರೈತರು ಹಾಗೂ ಕೃಷಿ ಕಾರ್ಮಿಕರ ಆತ್ಮಹತ್ಯೆಗಳು ಸ್ವಲ್ಪ ಕಡಿಮೆಯಾಗಿವೆ. ಆದರೆ, ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 22.61ರಷ್ಟು ಹೆಚ್ಚಳ ಆಗಿದೆ ಎಂದು ‘ಭಾರತದಲ್ಲಿ ಅಪಘಾತದ ಸಾವುಗಳು ಹಾಗೂ ಆತ್ಮಹತ್ಯೆಗಳು–2024’ ವರದಿ ತಿಳಿಸಿದೆ. </p>.<p>ಬುಧವಾರ ಪ್ರಕಟವಾದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (ಎನ್ಸಿಆರ್ಬಿ) ವರದಿ ಪ್ರಕಾರ, ದೇಶದಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿರುವ 10,546 ಮಂದಿ 2024ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ ಈ ಸಂಖ್ಯೆ 10,786 ಆಗಿತ್ತು. ದೇಶದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 2.22ರಷ್ಟು ಕಡಿಮೆ ಆಗಿದೆ. ಆದರೆ, ಕರ್ನಾಟಕದಲ್ಲಿ ಈ ಸಂಖ್ಯೆ 2,423ರಿಂದ 2,971ಕ್ಕೆ ಏರಿಕೆ ಆಗಿದೆ.</p>.<p>ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಅನ್ನದಾತರ ಆತ್ಮಹತ್ಯೆಯಲ್ಲಿ ಮೊದಲ ಐದು ಸ್ಥಾನದಲ್ಲಿರುವ ರಾಜ್ಯಗಳ ಪೈಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ 2024ರಲ್ಲಿ ಈ ಸಂಖ್ಯೆ ಜಾಸ್ತಿ ಆಗಿದೆ. ರಾಜ್ಯದಲ್ಲಿ 2023ರಲ್ಲಿ 1,425 ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024ರಲ್ಲಿ 1,770 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 1,201 ಕೃಷಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. </p>.<p>ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಆತ್ಮಹತ್ಯೆ ಪ್ರಮಾಣ ಅಲ್ಪ ಇಳಿಕೆ ಆಗಿದ್ದರೆ, ಛತ್ತೀಸಗಢ, ಗುಜರಾತ್, ರಾಜಸ್ಥಾನ ಹಾಗೂ ಪುದುಚೆರಿಯಲ್ಲಿ ಸ್ವಲ್ಪ ಏರಿಕೆ ಆಗಿದೆ. ರೈತರ ಆತ್ಮಹತ್ಯೆಗೆ ಕಾರಣಗಳನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ. </p>.<p>ಆತ್ಮಹತ್ಯೆ ಮಾಡಿಕೊಂಡ 4,633 ರೈತರಲ್ಲಿ 4,134 ಜನರು ತಮ್ಮ ಸ್ವಂತ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರೆ, 499 ಜನರು ಗುತ್ತಿಗೆಗೆ ಭೂಮಿಯನ್ನು ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>