<p><strong>ಬೆಂಗಳೂರು</strong>: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದ ರಸಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಆತಂಕ ಎದುರಾಗಿದ್ದು, ಗೊಬ್ಬರ ಮಾರಾಟ ಮತ್ತು ಸಾಗಣೆ ಮೇಲೆ ನಿಗಾ ಇರಿಸಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.</p>.<p>ಏಪ್ರಿಲ್ 1ರ ಅಂತ್ಯಕ್ಕೆ ರಾಜ್ಯದಲ್ಲಿ 11.42 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದ್ದು, ಕೃಷಿಯೇತರ ಬಳಕೆ ಮತ್ತು ಹೊರರಾಜ್ಯಕ್ಕೆ ಅಕ್ರಮ ಸಾಗಣೆ ಆಗುವುದನ್ನು ತಡೆಗಟ್ಟಲು ಕೃಷಿ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಭಾರತಕ್ಕೆ ಯುಎಇ, ಸೌದಿ ಅರೇಬಿಯಾ, ಬಹ್ರೇನ್ ಮತ್ತು ರಷ್ಯಾದಿಂದ ರಸಗೊಬ್ಬರದ ಕಚ್ಚಾ ವಸ್ತು ಆಮದು ಮಾಡಿಕೊಳ್ಳಲಾಗುತ್ತದೆ. ಅಮೆರಿಕ– ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧದ ಕಾರಣದಿಂದಾಗಿ ರಷ್ಯಾ ಹೊರತುಪಡಿಸಿ ಉಳಿದ ದೇಶಗಳಿಂದ ಕಚ್ಚಾವಸ್ತು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಕೇಂದ್ರ ಸರ್ಕಾರವು ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 30.05 ಲಕ್ಷ ಟನ್ ಗೊಬ್ಬರ ಹಂಚಿಕೆ ಮಾಡಿದೆ. ಆದರೆ, ಸಂಘರ್ಷದ ಕಾರಣದಿಂದ ಉತ್ಪಾದನೆ ಕುಸಿದರೆ. ಕೊರತೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. </p>.<p>ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ (ಕೆಎಸ್ಸಿಎಂಎಫ್) ಮತ್ತು ಕರ್ನಾಟಕ ಬೀಜ ನಿಗಮ (ಕೆಎಸ್ಎಸ್ಸಿ) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಕಾಪು ದಾಸ್ತಾನಿನಲ್ಲಿ ಈಗ 28,224 ಟನ್ ಗೊಬ್ಬರ ಲಭ್ಯವಿದೆ. ಕಾಪು ದಾಸ್ತಾನಿನಲ್ಲಿ ಶೇ 25 ರಷ್ಟು ಯೂರಿಯಾ ಮತ್ತು ಡಿ.ಎ.ಪಿ ಸಂಗ್ರಹ ಮಟ್ಟ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p>ಸಹಾಯಧನ ಸಹಿತ ಯೂರಿಯಾವನ್ನು ಕೃಷಿಯೇತರ ಚಟುವಟಿಕೆಯಲ್ಲಿ ಅಕ್ರಮ ಬಳಕೆಯ ತಡೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಲಾಗಿದೆ. ಅಕ್ರಮ ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದ ರಸಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಆತಂಕ ಎದುರಾಗಿದ್ದು, ಗೊಬ್ಬರ ಮಾರಾಟ ಮತ್ತು ಸಾಗಣೆ ಮೇಲೆ ನಿಗಾ ಇರಿಸಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.</p>.<p>ಏಪ್ರಿಲ್ 1ರ ಅಂತ್ಯಕ್ಕೆ ರಾಜ್ಯದಲ್ಲಿ 11.42 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದ್ದು, ಕೃಷಿಯೇತರ ಬಳಕೆ ಮತ್ತು ಹೊರರಾಜ್ಯಕ್ಕೆ ಅಕ್ರಮ ಸಾಗಣೆ ಆಗುವುದನ್ನು ತಡೆಗಟ್ಟಲು ಕೃಷಿ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಭಾರತಕ್ಕೆ ಯುಎಇ, ಸೌದಿ ಅರೇಬಿಯಾ, ಬಹ್ರೇನ್ ಮತ್ತು ರಷ್ಯಾದಿಂದ ರಸಗೊಬ್ಬರದ ಕಚ್ಚಾ ವಸ್ತು ಆಮದು ಮಾಡಿಕೊಳ್ಳಲಾಗುತ್ತದೆ. ಅಮೆರಿಕ– ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧದ ಕಾರಣದಿಂದಾಗಿ ರಷ್ಯಾ ಹೊರತುಪಡಿಸಿ ಉಳಿದ ದೇಶಗಳಿಂದ ಕಚ್ಚಾವಸ್ತು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಕೇಂದ್ರ ಸರ್ಕಾರವು ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 30.05 ಲಕ್ಷ ಟನ್ ಗೊಬ್ಬರ ಹಂಚಿಕೆ ಮಾಡಿದೆ. ಆದರೆ, ಸಂಘರ್ಷದ ಕಾರಣದಿಂದ ಉತ್ಪಾದನೆ ಕುಸಿದರೆ. ಕೊರತೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. </p>.<p>ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ (ಕೆಎಸ್ಸಿಎಂಎಫ್) ಮತ್ತು ಕರ್ನಾಟಕ ಬೀಜ ನಿಗಮ (ಕೆಎಸ್ಎಸ್ಸಿ) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಕಾಪು ದಾಸ್ತಾನಿನಲ್ಲಿ ಈಗ 28,224 ಟನ್ ಗೊಬ್ಬರ ಲಭ್ಯವಿದೆ. ಕಾಪು ದಾಸ್ತಾನಿನಲ್ಲಿ ಶೇ 25 ರಷ್ಟು ಯೂರಿಯಾ ಮತ್ತು ಡಿ.ಎ.ಪಿ ಸಂಗ್ರಹ ಮಟ್ಟ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p>ಸಹಾಯಧನ ಸಹಿತ ಯೂರಿಯಾವನ್ನು ಕೃಷಿಯೇತರ ಚಟುವಟಿಕೆಯಲ್ಲಿ ಅಕ್ರಮ ಬಳಕೆಯ ತಡೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಲಾಗಿದೆ. ಅಕ್ರಮ ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>