ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಮೈಸೂರು ಜಿಲ್ಲೆಯಲ್ಲಿ ಕಂಡ ಅಪಮಾನಕರ ಸೋಲು, ಕರಾವಳಿ ಭಾಗದಲ್ಲಿ ಕಾಂಗ್ರೆಸ್ ದುರ್ಬಲವಾಗಿರುವುದು ಸಿದ್ದರಾಮಯ್ಯ ಅವರಿಗೆ ನಿದ್ದೆಗೆಡಿಸಿದೆ. ಇದರ ಕೋಪವನ್ನು ಕರ್ನಾಟಕದ ಭೂಪಟದ ಮೇಲೆ ತೋರಿಸಿ, ಮೈಸೂರು ಹಾಗೂ ಕರಾವಳಿ ಭಾಗಕ್ಕೆ ಕತ್ತರಿ ಹಾಕಿದ್ದಾರೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಭೂಪಟವನ್ನು ವಿರೂಪಗೊಳಿಸಿದ್ದು ಕನ್ನಡಿಗರಿಗೆ ಮಾಡಿದ ಅವಮಾನ’ ಎಂದು ವಾಗ್ದಾಳಿ ನಡೆಸಿದೆ.