ಬುಧವಾರ, 31 ಡಿಸೆಂಬರ್ 2025
×
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಮನೆ ಯಾವಾಗ ನೀಡುತ್ತೀರಿ: ಸಿದ್ದರಾಮಯ್ಯಗೆ ಅಶೋಕ ಪ್ರಶ್ನೆ

Published : 31 ಡಿಸೆಂಬರ್ 2025, 16:45 IST
Last Updated : 31 ಡಿಸೆಂಬರ್ 2025, 16:45 IST
ಫಾಲೋ ಮಾಡಿ
Comments
ಇಲ್ಲಿದ್ದ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ರಾಜ್ಯ ಸರ್ಕಾರದ ಸಚಿವರೇ ಬಂದು ಬೇರೆಡೆಗೆ ಸ್ಥಳಾಂತರ ಮಾಡಿಸಿದ್ದಾರೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು
ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ
ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಕೆಲಸ ಆಗಬೇಕು. ಆದರೆ ರಾಜ್ಯ ಸರ್ಕಾರವು ಇಲ್ಲಿ ನೆಲೆಸಿದ್ದವರು ಬಾಂಗ್ಲಾದವರು ಎಂಬ ಸತ್ಯವನ್ನೇ ಮುಚ್ಚಿಹಾಕಲು ಹೊರಟಿದೆ
ಸಿ.ಎನ್‌.ಅಶ್ವತ್ಥ ನಾರಾಯಣ್‌ ಬಿಜೆಪಿ ಶಾಸಕ
ಕೋಗಿಲು: ಬಿಜೆಪಿ ಸತ್ಯ ಶೋಧನಾ ತಂಡ ರಚನೆ
ಕೋಗಿಲು ಬಡಾವಣೆಯಲ್ಲಿ ಇತ್ತೀಚೆಗೆ ಮನೆಗಳನ್ನು ನೆಲಸಮ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಪಡೆಯಲು ಬಿಜೆಪಿಯು ಸತ್ಯ ಶೋಧನಾ ತಂಡವನ್ನು ರಚಿಸಿದೆ. ಶಾಸಕರಾದ ಎಸ್‌.ಆರ್‌.ವಿಶ್ವನಾಥ್‌ ಎಸ್‌.ಮುನಿರಾಜು ವಿಧಾನಪರಿಷತ್ ಸದಸ್ಯ ಕೆ.ಎಸ್‌.ನವೀನ್‌ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ ಕಾರ್ಯದರ್ಶಿ ತಮ್ಮೇಶ್‌ ಗೌಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಹರೀಶ್‌ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ತಂಡದಲ್ಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 2ಕ್ಕೆ ಮನೆಗಳ ಹಂಚಿಕೆ: ಸಚಿವ ಜಮೀರ್‌
‘ಕೋಗಿಲು ಕ್ವಾರಿ ಪ್ರದೇಶದಲ್ಲಿ ಮನೆ ಕಳೆದುಕೊಂಡವರ ಪೈಕಿ ಅರ್ಹರಿಗೆ ಜನವರಿ 2ರಂದು ಮನೆಗಳನ್ನು ಹಂಚಿಕೆ ಮಾಡಲಾಗುವುದು’ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್‌ ಖಾನ್‌ ತಿಳಿಸಿದ್ದಾರೆ. ‘ಅರ್ಹರಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ’ ಎಂದಿದ್ದಾರೆ. ‘ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯಿಂದ ಮನೆ ಕಳೆದುಕೊಂಡವರಲ್ಲಿ ಅರ್ಹರು ಯಾರಿದ್ದಾರೆ ಎಂಬ ಬಗ್ಗೆ ದಾಖಲೆ ಪರಿಶೀಲನೆ ನಡೆಯುತ್ತಿದೆ. ಅರ್ಹರಿಗಷ್ಟೇ ಮನೆ ನಿರ್ಮಾಣ ಮಾಡಿಕೊಡುವುದು ಸರ್ಕಾರದ ಉದ್ದೇಶ. ಹೀಗಾಗಿ ತರಾತುರಿ ಮಾಡಿದೇ ದಾಖಲೆಗಳ ಸಮಗ್ರ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆ ಕಾರ್ಯದಲ್ಲಿ ನಿರತರಾಗಿದ್ದಾರೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT