<p><strong>ಹೊಸಪೇಟೆ:</strong> ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು, ಹೊರಹರಿವು ಸೋಮವಾರ ಮತ್ತಷ್ಟು ತಗ್ಗಿದ್ದು, ತಾಲ್ಲೂಕಿನ ಕೆಲ ಗ್ರಾಮಗಳು ಮುಳುಗಡೆ ಭೀತಿಯಿಂದ ದೂರವಾಗಿವೆ.</p>.<p>ನಾಲ್ಕೈದು ದಿನಗಳಿಂದ ಸತತವಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿತ್ತು. 1,25,000 ಕ್ಯುಸೆಕ್ ವರೆಗೆ ನೀರು ಬಿಡಲಾಗಿತ್ತು. ಎರಡು ಲಕ್ಷ ಕ್ಯುಸೆಕ್ ವರೆಗೆ ಹೆಚ್ಚಾಗುವ ಸಾಧ್ಯತೆ ಇತ್ತು. ಅದರಿಂದ ತಾಲ್ಲೂಕಿನ ಹಂಪಿ, ವೆಂಕಟಾಪುರ ಹಾಗೂ ಬುಕ್ಕಸಾಗರ ಗ್ರಾಮಗಳು ಮುಳುಗಡೆಯ ಭೀತಿ ಎದುರಿಸುತ್ತಿದ್ದವು.</p>.<p>ಕಂಪ್ಲಿ–ಗಂಗಾವತಿ ಸೇತುವೆಗೆ ಸಮನಾಗಿ ನೀರು ಹರಿಯುತ್ತಿದ್ದರಿಂದ ವಾಹನ ಸಂಚಾರ ಕಡಿತಗೊಳ್ಳುವ ಸಾಧ್ಯತೆ ಇತ್ತು. ಆದರೆ, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವ ಕಾರಣ ಸೇತುವೆ ಮೇಲೆ ಲಘು ವಾಹನ ಸಂಚಾರ ಆರಂಭಗೊಂಡಿದೆ. ನದಿ ಅಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಹಂಪಿಯ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಚಕ್ರತೀರ್ಥ ಈಗಲೂ ಸಂಪೂರ್ಣವಾಗಿ ನೀರಿನಲ್ಲಿಯೇ ಇವೆ.<br />1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,632.14 ಅಡಿ ನೀರು ಸಂಗ್ರಹವಾಗಿದೆ. 96,546 ಕ್ಯುಸೆಕ್ ಒಳಹರಿವು ಇದ್ದರೆ, 96,600 ಕ್ಯುಸೆಕ್ ಹೊರಹರಿವು ದಾಖಲಾಗಿದೆ. ಭಾನುವಾರ 97,352 ಕ್ಯುಸೆಕ್ ಒಳಹರಿವು, 1,01,000 ಕ್ಯುಸೆಕ್ ಹೊರಹರಿವು ಇತ್ತು.</p>.<p><strong>ಮಳೆ ಇಳಿಮುಖ, ಮುಂದುವರಿದ ಪ್ರವಾಹ</strong></p>.<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಹಾಗೂ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಇಳಿಮುಖವಾಗಿದೆ.ಆದಾಗ್ಯೂ, ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರಿಕೆಯಲ್ಲಿಯೇ ಇದೆ.</p>.<p>ಚಿಕ್ಕೋಡಿ ಬಳಿ ಕೃಷ್ಣಾ ನದಿಗೆ 1.88 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ನಿನ್ನೆಗೆ ಹೋಲಿಸಿದರೆ 8,000 ಕ್ಯುಸೆಕ್ ಹೆಚ್ಚು ಇದಾಗಿದೆ.<br />ಮಲಪ್ರಭಾ ಹಾಗೂ ಘಟಪ್ರಭಾ ಹರಿವು ಕೂಡ ಇಳಿಮುಖವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು, ಹೊರಹರಿವು ಸೋಮವಾರ ಮತ್ತಷ್ಟು ತಗ್ಗಿದ್ದು, ತಾಲ್ಲೂಕಿನ ಕೆಲ ಗ್ರಾಮಗಳು ಮುಳುಗಡೆ ಭೀತಿಯಿಂದ ದೂರವಾಗಿವೆ.</p>.<p>ನಾಲ್ಕೈದು ದಿನಗಳಿಂದ ಸತತವಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿತ್ತು. 1,25,000 ಕ್ಯುಸೆಕ್ ವರೆಗೆ ನೀರು ಬಿಡಲಾಗಿತ್ತು. ಎರಡು ಲಕ್ಷ ಕ್ಯುಸೆಕ್ ವರೆಗೆ ಹೆಚ್ಚಾಗುವ ಸಾಧ್ಯತೆ ಇತ್ತು. ಅದರಿಂದ ತಾಲ್ಲೂಕಿನ ಹಂಪಿ, ವೆಂಕಟಾಪುರ ಹಾಗೂ ಬುಕ್ಕಸಾಗರ ಗ್ರಾಮಗಳು ಮುಳುಗಡೆಯ ಭೀತಿ ಎದುರಿಸುತ್ತಿದ್ದವು.</p>.<p>ಕಂಪ್ಲಿ–ಗಂಗಾವತಿ ಸೇತುವೆಗೆ ಸಮನಾಗಿ ನೀರು ಹರಿಯುತ್ತಿದ್ದರಿಂದ ವಾಹನ ಸಂಚಾರ ಕಡಿತಗೊಳ್ಳುವ ಸಾಧ್ಯತೆ ಇತ್ತು. ಆದರೆ, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವ ಕಾರಣ ಸೇತುವೆ ಮೇಲೆ ಲಘು ವಾಹನ ಸಂಚಾರ ಆರಂಭಗೊಂಡಿದೆ. ನದಿ ಅಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಹಂಪಿಯ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಚಕ್ರತೀರ್ಥ ಈಗಲೂ ಸಂಪೂರ್ಣವಾಗಿ ನೀರಿನಲ್ಲಿಯೇ ಇವೆ.<br />1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,632.14 ಅಡಿ ನೀರು ಸಂಗ್ರಹವಾಗಿದೆ. 96,546 ಕ್ಯುಸೆಕ್ ಒಳಹರಿವು ಇದ್ದರೆ, 96,600 ಕ್ಯುಸೆಕ್ ಹೊರಹರಿವು ದಾಖಲಾಗಿದೆ. ಭಾನುವಾರ 97,352 ಕ್ಯುಸೆಕ್ ಒಳಹರಿವು, 1,01,000 ಕ್ಯುಸೆಕ್ ಹೊರಹರಿವು ಇತ್ತು.</p>.<p><strong>ಮಳೆ ಇಳಿಮುಖ, ಮುಂದುವರಿದ ಪ್ರವಾಹ</strong></p>.<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಹಾಗೂ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಇಳಿಮುಖವಾಗಿದೆ.ಆದಾಗ್ಯೂ, ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರಿಕೆಯಲ್ಲಿಯೇ ಇದೆ.</p>.<p>ಚಿಕ್ಕೋಡಿ ಬಳಿ ಕೃಷ್ಣಾ ನದಿಗೆ 1.88 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ನಿನ್ನೆಗೆ ಹೋಲಿಸಿದರೆ 8,000 ಕ್ಯುಸೆಕ್ ಹೆಚ್ಚು ಇದಾಗಿದೆ.<br />ಮಲಪ್ರಭಾ ಹಾಗೂ ಘಟಪ್ರಭಾ ಹರಿವು ಕೂಡ ಇಳಿಮುಖವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>