<p><strong>ಬೆಂಗಳೂರು:</strong> ಶುಕ್ರವಾರ ಮಧ್ಯಾಹ್ನ 1.20ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ವಿರುದ್ಧ ಜೆಡಿಎಸ್–ಕಾಂಗ್ರೆಸ್ ಶಾಸಕರು ಕಿಡಿ ಕಾರಿದರು.</p>.<p>ವಿಧಾನಸಭೆಯಲ್ಲಿ ಶುಕ್ರವಾರ ಮೈತ್ರಿ ಸದಸ್ಯರು, ‘ರಾಜ್ಯಪಾಲರು ಬಿಜೆಪಿ ಪಕ್ಷಪಾತಿಯಂತೆ ವರ್ತಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಗೋ ಬ್ಯಾಕ್ ಗವರ್ನರ್’ ಎಂದೂ ಘೋಷಣೆ ಕೂಗಿದರು.</p>.<p>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಅವರು ಹೀಗೆ ಸೂಚನೆ ನೀಡಬಹುದೇ. ಸಭಾಧ್ಯಕ್ಷರು ಮಾರ್ಗದರ್ಶನ ನೀಡಬೇಕು’ ಎಂದು ಕೋರಿದರು.</p>.<p>‘ಸಭಾನಾಯಕರೇ ವಿಶ್ವಾಸಮತದ ಪ್ರಸ್ತಾವ ಮಂಡಿಸಿದ್ದಾರೆ. ಹೀಗಾಗಿ, ಈ ನಿರ್ಣಯ ಸದನದ ಸ್ವತ್ತು. ಸದಸ್ಯರ ಹಕ್ಕು ಮೊಟಕು ಮಾಡುವುದು ಸರಿಯೇ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.</p>.<p>ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅರುಣಾಚಲ ಪ್ರದೇಶದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಉಲ್ಲೇಖಿಸಿದರು.</p>.<p>‘ರಾಜ್ಯಪಾಲರು ಕಾನೂನು ಚೌಕಟ್ಟು ಮೀರಿ ವರ್ತಿಸಬಾರದು. ನಿಮ್ಮ ಅಧಿಕಾರದ ಹಪಾಹಪಿಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಆಗುತ್ತಿದೆ’ ಎಂದು ಆರೋಪಿಸಿದರು.</p>.<p>ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ‘ವಿಶ್ವಾಸಮತ ಮಂಡನೆಯ ಪ್ರಸ್ತಾವವನ್ನು ಮುಖ್ಯಮಂತ್ರಿ ಅವರೇ ಮಂಡಿಸಿದ್ದು, ಚರ್ಚೆ ನಡೆಯುತ್ತಿದೆ. ಈ ವೇಳೆ ಗಡುವು ನೀಡಲು ರಾಜ್ಯಪಾಲರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ರೀ ರೀತಿ ಹೇಳಿರುವುದು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ’ ಎಂದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/karnataka-cm-twice-ignores-652273.html" target="_blank"><strong>‘ಅಧಿಕಾರ’ಕ್ಕಾಗಿ ನಿಲ್ಲದ ಹಗ್ಗಜಗ್ಗಾಟ: ರಾಜ್ಯಪಾಲರಿಗೆ ‘ದೋಸ್ತಿ’ ಸಡ್ಡು</strong></a></p>.<p><strong><a href="https://www.prajavani.net/stories/stateregional/ktk-cm-twice-ignores-guvs-652221.html" target="_blank">ಶಾಸಕರಿಗೆ ಕೋಟಿ ಕೋಟಿ ಆಮಿಷ: ಬಿಜೆಪಿ ವಿರುದ್ಧ ಕಾಂಗ್ರೆಸ್–ಜೆಡಿಎಸ್ ಆರೋಪ</a></strong></p>.<p><a href="https://www.prajavani.net/district/bengaluru-city/bjp-aptbandhava-652262.html" target="_blank"><strong>ಬಿಜೆಪಿ ಮೇಲಿನ ದಾಳಿಗೆ ಮಾಧುಸ್ವಾಮಿ ‘ತಡೆಗೋಡೆ’</strong></a></p>.<p><a href="https://www.prajavani.net/stories/national/assembly-speaker-652225.html" target="_blank"><strong>ದರಿದ್ರ, ಹೊಲಸು ಎಲ್ಲವೂ ಹೊರಗೆ ಬರಲಿ: ಸಭಾಧ್ಯಕ್ಷರ ಆಕ್ರೋಶ</strong></a></p>.<p><a href="https://www.prajavani.net/stories/stateregional/karnataka-assembly-mla-652226.html" target="_blank"><strong>ಉಲ್ಟಾ ಹೊಡೆದ ‘ಗುಳ್ಳೆ ನರಿ ಶಾಸ್ತ್ರ’</strong></a></p>.<p><a href="https://www.prajavani.net/stories/stateregional/karnataka-floor-test-jds-652231.html" target="_blank"><strong>ಸುಪ್ರೀಂ ಕೋರ್ಟ್ ನೆರವಿನ ನಿರೀಕ್ಷೆಯಲ್ಲಿ ‘ದೋಸ್ತಿ’ಗಳು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶುಕ್ರವಾರ ಮಧ್ಯಾಹ್ನ 1.20ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ವಿರುದ್ಧ ಜೆಡಿಎಸ್–ಕಾಂಗ್ರೆಸ್ ಶಾಸಕರು ಕಿಡಿ ಕಾರಿದರು.</p>.<p>ವಿಧಾನಸಭೆಯಲ್ಲಿ ಶುಕ್ರವಾರ ಮೈತ್ರಿ ಸದಸ್ಯರು, ‘ರಾಜ್ಯಪಾಲರು ಬಿಜೆಪಿ ಪಕ್ಷಪಾತಿಯಂತೆ ವರ್ತಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಗೋ ಬ್ಯಾಕ್ ಗವರ್ನರ್’ ಎಂದೂ ಘೋಷಣೆ ಕೂಗಿದರು.</p>.<p>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಅವರು ಹೀಗೆ ಸೂಚನೆ ನೀಡಬಹುದೇ. ಸಭಾಧ್ಯಕ್ಷರು ಮಾರ್ಗದರ್ಶನ ನೀಡಬೇಕು’ ಎಂದು ಕೋರಿದರು.</p>.<p>‘ಸಭಾನಾಯಕರೇ ವಿಶ್ವಾಸಮತದ ಪ್ರಸ್ತಾವ ಮಂಡಿಸಿದ್ದಾರೆ. ಹೀಗಾಗಿ, ಈ ನಿರ್ಣಯ ಸದನದ ಸ್ವತ್ತು. ಸದಸ್ಯರ ಹಕ್ಕು ಮೊಟಕು ಮಾಡುವುದು ಸರಿಯೇ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.</p>.<p>ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅರುಣಾಚಲ ಪ್ರದೇಶದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಉಲ್ಲೇಖಿಸಿದರು.</p>.<p>‘ರಾಜ್ಯಪಾಲರು ಕಾನೂನು ಚೌಕಟ್ಟು ಮೀರಿ ವರ್ತಿಸಬಾರದು. ನಿಮ್ಮ ಅಧಿಕಾರದ ಹಪಾಹಪಿಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಆಗುತ್ತಿದೆ’ ಎಂದು ಆರೋಪಿಸಿದರು.</p>.<p>ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ‘ವಿಶ್ವಾಸಮತ ಮಂಡನೆಯ ಪ್ರಸ್ತಾವವನ್ನು ಮುಖ್ಯಮಂತ್ರಿ ಅವರೇ ಮಂಡಿಸಿದ್ದು, ಚರ್ಚೆ ನಡೆಯುತ್ತಿದೆ. ಈ ವೇಳೆ ಗಡುವು ನೀಡಲು ರಾಜ್ಯಪಾಲರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ರೀ ರೀತಿ ಹೇಳಿರುವುದು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ’ ಎಂದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/karnataka-cm-twice-ignores-652273.html" target="_blank"><strong>‘ಅಧಿಕಾರ’ಕ್ಕಾಗಿ ನಿಲ್ಲದ ಹಗ್ಗಜಗ್ಗಾಟ: ರಾಜ್ಯಪಾಲರಿಗೆ ‘ದೋಸ್ತಿ’ ಸಡ್ಡು</strong></a></p>.<p><strong><a href="https://www.prajavani.net/stories/stateregional/ktk-cm-twice-ignores-guvs-652221.html" target="_blank">ಶಾಸಕರಿಗೆ ಕೋಟಿ ಕೋಟಿ ಆಮಿಷ: ಬಿಜೆಪಿ ವಿರುದ್ಧ ಕಾಂಗ್ರೆಸ್–ಜೆಡಿಎಸ್ ಆರೋಪ</a></strong></p>.<p><a href="https://www.prajavani.net/district/bengaluru-city/bjp-aptbandhava-652262.html" target="_blank"><strong>ಬಿಜೆಪಿ ಮೇಲಿನ ದಾಳಿಗೆ ಮಾಧುಸ್ವಾಮಿ ‘ತಡೆಗೋಡೆ’</strong></a></p>.<p><a href="https://www.prajavani.net/stories/national/assembly-speaker-652225.html" target="_blank"><strong>ದರಿದ್ರ, ಹೊಲಸು ಎಲ್ಲವೂ ಹೊರಗೆ ಬರಲಿ: ಸಭಾಧ್ಯಕ್ಷರ ಆಕ್ರೋಶ</strong></a></p>.<p><a href="https://www.prajavani.net/stories/stateregional/karnataka-assembly-mla-652226.html" target="_blank"><strong>ಉಲ್ಟಾ ಹೊಡೆದ ‘ಗುಳ್ಳೆ ನರಿ ಶಾಸ್ತ್ರ’</strong></a></p>.<p><a href="https://www.prajavani.net/stories/stateregional/karnataka-floor-test-jds-652231.html" target="_blank"><strong>ಸುಪ್ರೀಂ ಕೋರ್ಟ್ ನೆರವಿನ ನಿರೀಕ್ಷೆಯಲ್ಲಿ ‘ದೋಸ್ತಿ’ಗಳು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>