‘ಜ್ಞಾನಭಾರತಿ ಬಳಿಯ ಕದಂಬ ಬಡಾವಣೆ ನಿವಾಸಿ ಚೈತ್ರಾ ಅವರು ಸೋಮವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಸಹೋದರ ಡಾ. ಶರತ್ ಬಾಬು ದೂರು ನೀಡಿದ್ದಾರೆ. ಯುಡಿಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ‘ಚೈತ್ರಾ, ಗುರುಪ್ರಸಾದ್, 23 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕದಂಬ ಬಡಾವಣೆಯಲ್ಲಿ ಕುಟುಂಬ ವಾಸವಿತ್ತು. ಕೆಲಸದ ನಿಮಿತ್ತ ಗುರುಪ್ರಸಾದ್ ಹಾವೇರಿಯಲ್ಲಿ ನೆಲೆಸಿದ್ದರು’ ಎಂದು ಹೇಳಿದರು.