<p><strong>ಬೆಂಗಳೂರು:</strong> ಕೋವಿಡ್ -19 ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆಸೂಚಿಸಿದೆ.</p>.<p>ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಿರಿಯ ವೈದ್ಯ ಡಾ.ಗಿರಿಧರ ಕಜೆ ಅವರನ್ನು ತಮ್ಮ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಈ ವಿಷಯ ತಿಳಿಸಿದರು.</p>.<p>‘ಆರಂಭದಲ್ಲಿ ಹತ್ತು ಮಂದಿ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲೇ ಆಯುರ್ವೇದ ಗುಳಿಗೆ ನೀಡಲಾಗುವುದು, ಅದರ ಫಲಿತಾಂಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ಎಂದು ಗಿರಿಧರ ಕಜೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.</p>.<p>ಸರ್ಕಾರದಿಂದ ಅಧಿಕೃತ ಆದೇಶ ಬಂದ ತಕ್ಷಣ ಈ ಔಷಧ ಪ್ರಯೋಗ ಆರಂಭವಾಗಲಿದೆ. ಬಹುಶಃ ಎರಡು, ಮೂರು ದಿನಗಳಲ್ಲಿ ಇದು ಆರಂಭವಾಗಬಹುದು, ಏನಿದ್ದರೂ ಸರ್ಕಾರ ಏನು ಸೂಚಿಸುತ್ತದೆಯೋ ಅದರಂತೆ ನಡೆಯಲಾಗುವುದು ಎಂದುಹೇಳಿದರು.</p>.<p>‘ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡಿಲ್ಲ, ಆಯುಷ್ ಇಲಾಖೆಯಿಂದ ನನಗೆ ನೋಟಿಸ್ ಬಂದಿಲ್ಲ, ರಾಜ್ಯ ಸರ್ಕಾರದ ಮೂಲಕ ಐಸಿಎಂಆರ್ಗೆ ಪ್ರಸ್ತಾವನೆ ಕಳುಹಿಸಲಾಗಲಾಗಿತ್ತು’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ -19 ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆಸೂಚಿಸಿದೆ.</p>.<p>ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಿರಿಯ ವೈದ್ಯ ಡಾ.ಗಿರಿಧರ ಕಜೆ ಅವರನ್ನು ತಮ್ಮ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಈ ವಿಷಯ ತಿಳಿಸಿದರು.</p>.<p>‘ಆರಂಭದಲ್ಲಿ ಹತ್ತು ಮಂದಿ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲೇ ಆಯುರ್ವೇದ ಗುಳಿಗೆ ನೀಡಲಾಗುವುದು, ಅದರ ಫಲಿತಾಂಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ಎಂದು ಗಿರಿಧರ ಕಜೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.</p>.<p>ಸರ್ಕಾರದಿಂದ ಅಧಿಕೃತ ಆದೇಶ ಬಂದ ತಕ್ಷಣ ಈ ಔಷಧ ಪ್ರಯೋಗ ಆರಂಭವಾಗಲಿದೆ. ಬಹುಶಃ ಎರಡು, ಮೂರು ದಿನಗಳಲ್ಲಿ ಇದು ಆರಂಭವಾಗಬಹುದು, ಏನಿದ್ದರೂ ಸರ್ಕಾರ ಏನು ಸೂಚಿಸುತ್ತದೆಯೋ ಅದರಂತೆ ನಡೆಯಲಾಗುವುದು ಎಂದುಹೇಳಿದರು.</p>.<p>‘ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡಿಲ್ಲ, ಆಯುಷ್ ಇಲಾಖೆಯಿಂದ ನನಗೆ ನೋಟಿಸ್ ಬಂದಿಲ್ಲ, ರಾಜ್ಯ ಸರ್ಕಾರದ ಮೂಲಕ ಐಸಿಎಂಆರ್ಗೆ ಪ್ರಸ್ತಾವನೆ ಕಳುಹಿಸಲಾಗಲಾಗಿತ್ತು’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>