‘ಜಿಲ್ಲೆಯ ಉಸ್ತುವಾರಿಯನ್ನು ನನಗೆ ಕೊಡಲು ಸ್ವತಃ ಮುಖ್ಯಮಂತ್ರಿ ಬಯಸಿದ್ದರು. ಆದರೆ ಬೆಳಗಾವಿ ದೊಡ್ಡ ಜಿಲ್ಲೆ ಆಗಿರುವುದರಿಂದ ಜವಾಬ್ದಾರಿಯೂ ದೊಡ್ಡದಿರುತ್ತದೆ, ದೊಡ್ಡದಾದ ಜಲಸಂಪನ್ಮೂಲ ಖಾತೆ ನಿಭಾಯಿಸುವ ಜೊತೆಗೆ ಜಿಲ್ಲಾ ಉಸ್ತುವಾರಿಯನ್ನೂ ನಿಭಾಯಿಸುವುದು ಸಾಧ್ಯವಿಲ್ಲ. ಹೀಗಾಗಿ, ಉಸ್ತುವಾರಿ ಬೇಡ ಎಂದು ನಾನೇ ತಿಳಿಸಿದ್ದೇನೆ. ಶೆಟ್ಟರ್ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೇರೆ ಅಲ್ಲ, ನಾನು ಬೇರೆ ಅಲ್ಲ’ ಎಂದು ಹೇಳಿಕೆ ನೀಡಿದ್ದಾರೆ.