<p><strong>ಬೆಂಗಳೂರು:</strong> ಜಿಂದಾಲ್ಗೆ ಭೂಮಿ ಮಾರಾಟ ಮಾಡುವಾಗ ಆ ಕಂಪೆನಿಗೆ ಕೆಲವು ಷರತ್ತುಗಳನ್ನು ವಿಧಿಸಬೇಕು ಎಂದು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಒತ್ತಾಯಿಸಿದರು.</p>.<p>ಕನ್ನಡಿಗರ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂಬುದು ಸಚಿವರ ಬಹು ಮುಖ್ಯ ಬೇಡಿಕೆಯಾಗಿತ್ತು. ಈ ಕುರಿತು ಸುದೀರ್ಘ ಚರ್ಚೆ ನಡೆಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ಮಾರಾಟ ಸಮರ್ಥನೆ: ಜಿಂದಾಲ್ ಕಂಪನಿಯ ಕಾರ್ಖಾನೆ, ವಸತಿ ಸಮುಚ್ಛಯ, ವಿದ್ಯುತ್ ಉತ್ಪಾದನಾ ಘಟಕ ಇರುವ ಕಾಂಪೌಂಡ್ ಒಳಗಿನ ಜಾಗವನ್ನು ಮಾತ್ರ ಗುತ್ತಿಗೆ ಮತ್ತು ಮಾರಾಟದ ಕರಾರಿನ ಆಧಾರದ ಮೇಲೆ ಭೂಮಿಯನ್ನು ಮಾರಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸಮರ್ಥಿಸಿಕೊಂಡರು.</p>.<p>ಲೀಸ್ ಕಂ ಸೇಲ್ ಡೀಡ್ 2006 ರಲ್ಲೇ ಆಗಿತ್ತು. ಕಂಪನಿಯು ಷರತ್ತುಗಳನ್ನು ಪೂರೈಸಿರುವುದು ತೃಪ್ತಿದಾಯಕವಾಗಿದ್ದರಿಂದ ಕಾನೂನು ಪ್ರಕಾರವೇ ಮಾರಾಟಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಗಣಿಗಾರಿಕೆ ಭೂಮಿಯನ್ನು ಮಾರಾಟ ಮಾಡಿಲ್ಲ. ಗಣಿಗಾರಿಕೆಯನ್ನು ಲೀಸ್ ಆಧಾರದಲ್ಲಿಯೇ ನೀಡಲಾಗಿದೆ ಎಂದರು.</p>.<p class="Subhead"><strong>ಅಧಿಕಾರಿಗಳ ಹಿತ ಕಾಪಾಡುತ್ತೇವೆ:</strong>ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998 ರ ಸಾಲಿನಲ್ಲಿ ನಡೆಸಿದ ಅಕ್ರಮ ನೇಮಕಾತಿಗಳನ್ನು ಸಕ್ರಮಗೊಳಿಸಲು ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿದಿಲ್ಲ. ಬದಲಿಗೆ ಯಾವುದೇ ಅಧಿಕಾರಿಗಳಿಗೆ ಅನ್ಯಾಯ ಆಗದಂತೆ ಎಚ್ಚರಿಕೆ ವಹಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಸುಗ್ರೀವಾಜ್ಞೆಯಿಂದ ಸಾಕಷ್ಟು ಅಧಿಕಾರಿಗಳಿಗೆ ಅನ್ಯಾಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿ ಶಾಸಕರು ಸ್ಪೀಕರ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ಕುರಿತು ಸಚಿವ ಸಂಪುಟಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಸುಗ್ರೀವಾಜ್ಞೆ ಹೊರಡಿಸುವಾಗ 1998 ರ ನಂತರ ನೇಮಕಗೊಂಡ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಮುಂಬಡ್ತಿಗೆ ಮತ್ತು ಅವರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಯಿತು. ಇದಕ್ಕಾಗಿ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಂದಾಲ್ಗೆ ಭೂಮಿ ಮಾರಾಟ ಮಾಡುವಾಗ ಆ ಕಂಪೆನಿಗೆ ಕೆಲವು ಷರತ್ತುಗಳನ್ನು ವಿಧಿಸಬೇಕು ಎಂದು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಒತ್ತಾಯಿಸಿದರು.</p>.<p>ಕನ್ನಡಿಗರ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂಬುದು ಸಚಿವರ ಬಹು ಮುಖ್ಯ ಬೇಡಿಕೆಯಾಗಿತ್ತು. ಈ ಕುರಿತು ಸುದೀರ್ಘ ಚರ್ಚೆ ನಡೆಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ಮಾರಾಟ ಸಮರ್ಥನೆ: ಜಿಂದಾಲ್ ಕಂಪನಿಯ ಕಾರ್ಖಾನೆ, ವಸತಿ ಸಮುಚ್ಛಯ, ವಿದ್ಯುತ್ ಉತ್ಪಾದನಾ ಘಟಕ ಇರುವ ಕಾಂಪೌಂಡ್ ಒಳಗಿನ ಜಾಗವನ್ನು ಮಾತ್ರ ಗುತ್ತಿಗೆ ಮತ್ತು ಮಾರಾಟದ ಕರಾರಿನ ಆಧಾರದ ಮೇಲೆ ಭೂಮಿಯನ್ನು ಮಾರಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸಮರ್ಥಿಸಿಕೊಂಡರು.</p>.<p>ಲೀಸ್ ಕಂ ಸೇಲ್ ಡೀಡ್ 2006 ರಲ್ಲೇ ಆಗಿತ್ತು. ಕಂಪನಿಯು ಷರತ್ತುಗಳನ್ನು ಪೂರೈಸಿರುವುದು ತೃಪ್ತಿದಾಯಕವಾಗಿದ್ದರಿಂದ ಕಾನೂನು ಪ್ರಕಾರವೇ ಮಾರಾಟಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಗಣಿಗಾರಿಕೆ ಭೂಮಿಯನ್ನು ಮಾರಾಟ ಮಾಡಿಲ್ಲ. ಗಣಿಗಾರಿಕೆಯನ್ನು ಲೀಸ್ ಆಧಾರದಲ್ಲಿಯೇ ನೀಡಲಾಗಿದೆ ಎಂದರು.</p>.<p class="Subhead"><strong>ಅಧಿಕಾರಿಗಳ ಹಿತ ಕಾಪಾಡುತ್ತೇವೆ:</strong>ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998 ರ ಸಾಲಿನಲ್ಲಿ ನಡೆಸಿದ ಅಕ್ರಮ ನೇಮಕಾತಿಗಳನ್ನು ಸಕ್ರಮಗೊಳಿಸಲು ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿದಿಲ್ಲ. ಬದಲಿಗೆ ಯಾವುದೇ ಅಧಿಕಾರಿಗಳಿಗೆ ಅನ್ಯಾಯ ಆಗದಂತೆ ಎಚ್ಚರಿಕೆ ವಹಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಸುಗ್ರೀವಾಜ್ಞೆಯಿಂದ ಸಾಕಷ್ಟು ಅಧಿಕಾರಿಗಳಿಗೆ ಅನ್ಯಾಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿ ಶಾಸಕರು ಸ್ಪೀಕರ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ಕುರಿತು ಸಚಿವ ಸಂಪುಟಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಸುಗ್ರೀವಾಜ್ಞೆ ಹೊರಡಿಸುವಾಗ 1998 ರ ನಂತರ ನೇಮಕಗೊಂಡ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಮುಂಬಡ್ತಿಗೆ ಮತ್ತು ಅವರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಯಿತು. ಇದಕ್ಕಾಗಿ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>