<p><strong>ಬೆಂಗಳೂರು</strong>: ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನ ಮಾಡಿದ್ದ ಅಧ್ಯಕ್ಷರ ಅಧಿಕಾರ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ಹೀಗಾಗಿ, ಈಗಾಗಲೇ ಅವಧಿ ಮುಗಿದಿರುವ ಮತ್ತು ಅವಧಿ ಮುಗಿಯಲಿರುವ ಎಲ್ಲ ನಿಗಮ, ಮಂಡಳಿಗಳು ಮತ್ತು ಪ್ರಾಧಿಕಾರಗಳ ಅಧ್ಯಕ್ಷರು ತಮ್ಮ ಸ್ಥಾನದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಮುಂದುವರಿಯಬಹುದಾಗಿದೆ.</p>.<p>ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.</p>.<p>ಇಲಾಖೆಗಳು ತಮ್ಮ ವ್ಯಾಪ್ತಿಯ ಆಡಳಿತ ಕಾಯ್ದೆಗಳ ಪ್ರಕಾರ ಅಧ್ಯಕ್ಷರುಗಳಿಗೆ ಕಾರ್ಯನಿರ್ವಹಿಸಲು ಪೂರಕವಾದ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.</p>.<p>ವಿವಿಧ ನಿಗಮ, ಮಂಡಳಿಗಳು, ಪ್ರಾಧಿಕಾರಗಳಿಗೆ ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಅಧ್ಯಕ್ಷರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಿಸಿ 2024ರ ಫೆ. 28ರಂದು ಆದೇಶ ಹೊರಡಿಸಲಾಗಿತ್ತು. ಈ ಪೈಕಿ, ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಿ ಫೆ. 7ರಂದು ಮತ್ತೆ ಆದೇಶ ಹೊರಡಿಸಲಾಗಿದೆ.</p>.<p>ಫೆ.7ರ ಪಟ್ಟಿಯಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರು ಸೇರಿದಂತೆ ಕೆಲವು ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ಹೆಸರನ್ನು ಕೈಬಿಡಲಾಗಿದೆ. ಈ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡದ ಕಾರಣ ಹಾಲಿ ಇರುವವರ ಅವಧಿಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೆ. 26ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದರು. ಆ ಬೆನ್ನಲ್ಲೆ, ಈ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನ ಮಾಡಿದ್ದ ಅಧ್ಯಕ್ಷರ ಅಧಿಕಾರ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ಹೀಗಾಗಿ, ಈಗಾಗಲೇ ಅವಧಿ ಮುಗಿದಿರುವ ಮತ್ತು ಅವಧಿ ಮುಗಿಯಲಿರುವ ಎಲ್ಲ ನಿಗಮ, ಮಂಡಳಿಗಳು ಮತ್ತು ಪ್ರಾಧಿಕಾರಗಳ ಅಧ್ಯಕ್ಷರು ತಮ್ಮ ಸ್ಥಾನದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಮುಂದುವರಿಯಬಹುದಾಗಿದೆ.</p>.<p>ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.</p>.<p>ಇಲಾಖೆಗಳು ತಮ್ಮ ವ್ಯಾಪ್ತಿಯ ಆಡಳಿತ ಕಾಯ್ದೆಗಳ ಪ್ರಕಾರ ಅಧ್ಯಕ್ಷರುಗಳಿಗೆ ಕಾರ್ಯನಿರ್ವಹಿಸಲು ಪೂರಕವಾದ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.</p>.<p>ವಿವಿಧ ನಿಗಮ, ಮಂಡಳಿಗಳು, ಪ್ರಾಧಿಕಾರಗಳಿಗೆ ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಅಧ್ಯಕ್ಷರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಿಸಿ 2024ರ ಫೆ. 28ರಂದು ಆದೇಶ ಹೊರಡಿಸಲಾಗಿತ್ತು. ಈ ಪೈಕಿ, ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಿ ಫೆ. 7ರಂದು ಮತ್ತೆ ಆದೇಶ ಹೊರಡಿಸಲಾಗಿದೆ.</p>.<p>ಫೆ.7ರ ಪಟ್ಟಿಯಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರು ಸೇರಿದಂತೆ ಕೆಲವು ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ಹೆಸರನ್ನು ಕೈಬಿಡಲಾಗಿದೆ. ಈ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡದ ಕಾರಣ ಹಾಲಿ ಇರುವವರ ಅವಧಿಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೆ. 26ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದರು. ಆ ಬೆನ್ನಲ್ಲೆ, ಈ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>