<p><strong>ಬೆಂಗಳೂರು: </strong>ಬೆಂಗಳೂರು ಸಹಿತ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಂತೆಯೇ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸುವ ಚಿಕಿತ್ಸಾ ದರವನ್ನು ನಿಗದಿಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಖಾಸಗಿ ಆಸ್ಪತ್ರೆಗಳ ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಮೀಸಲಿಡುವುದನ್ನು ಕಡ್ಡಾಯಗೊಳಿಸಲಾಗಿದೆ.</p>.<p>ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಈ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರ ಕಳುಹಿಸುವ ರೋಗಿಗಳಿಗೆ ದಿನಕ್ಕೆ ಜನರಲ್ ವಾರ್ಡ್ಗೆ ₹ 5,000, ಎಚ್ಡಿಯು ₹ 7,000, ಐಸಿಯು ₹8,500 ಹಾಗೂ ವೆಂಟಿಲೇಟರ್ ಇರುವ ಐಸಿಯುಗೆ ₹10,000 ದರ ನಿಗದಿಪಡಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/medical-education-minister-sudhakar-wife-and-daughter-covid19-test-has-come-out-positive-738906.html" itemprop="url">ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ವೈರಸ್ ಸೋಂಕು</a></p>.<p>ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಒಳಪಟ್ಟರೆ ಅವರಿಂದ ಜನರಲ್ ವಾರ್ಡ್ಗೆ ದಿನಕ್ಕೆ ₹10,000, ಎಚ್ಡಿಯು ₹ 12,000, ಐಸಿಯು ₹15,000 ಹಾಗೂ ವೆಂಟಿಲೇಟರ್ ಸಹಿತ ಐಸಿಯುಗೆ ₹25,000ಕ್ಕಿಂತ ಅಧಿಕ ಶುಲ್ಕ ವಿಧಿಸುವಂತಿಲ್ಲ ಎಂದು ತಿಳಿಸಲಾಗಿದೆ.</p>.<p>ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ ಬಿಲ್ ಪಾವತಿಯ ನೋಡಲ್ ಏಜೆನ್ಸಿಯಾಗಿದ್ದು, ಬಿಪಿಎಲ್, ಎಪಿಎಲ್, ವಲಸೆ ಕಾರ್ಮಿಕರು ಮತ್ತು ಪಡಿತರ ಚೀಟಿ ಇಲ್ಲದೆ ಇತರ ರಾಜ್ಯಗಳಿಂದ ಮರಳಿದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಟ್ರಸ್ಟ್ ವಹಿಸಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಸಹಿತ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಂತೆಯೇ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸುವ ಚಿಕಿತ್ಸಾ ದರವನ್ನು ನಿಗದಿಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಖಾಸಗಿ ಆಸ್ಪತ್ರೆಗಳ ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಮೀಸಲಿಡುವುದನ್ನು ಕಡ್ಡಾಯಗೊಳಿಸಲಾಗಿದೆ.</p>.<p>ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಈ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರ ಕಳುಹಿಸುವ ರೋಗಿಗಳಿಗೆ ದಿನಕ್ಕೆ ಜನರಲ್ ವಾರ್ಡ್ಗೆ ₹ 5,000, ಎಚ್ಡಿಯು ₹ 7,000, ಐಸಿಯು ₹8,500 ಹಾಗೂ ವೆಂಟಿಲೇಟರ್ ಇರುವ ಐಸಿಯುಗೆ ₹10,000 ದರ ನಿಗದಿಪಡಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/medical-education-minister-sudhakar-wife-and-daughter-covid19-test-has-come-out-positive-738906.html" itemprop="url">ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ವೈರಸ್ ಸೋಂಕು</a></p>.<p>ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಒಳಪಟ್ಟರೆ ಅವರಿಂದ ಜನರಲ್ ವಾರ್ಡ್ಗೆ ದಿನಕ್ಕೆ ₹10,000, ಎಚ್ಡಿಯು ₹ 12,000, ಐಸಿಯು ₹15,000 ಹಾಗೂ ವೆಂಟಿಲೇಟರ್ ಸಹಿತ ಐಸಿಯುಗೆ ₹25,000ಕ್ಕಿಂತ ಅಧಿಕ ಶುಲ್ಕ ವಿಧಿಸುವಂತಿಲ್ಲ ಎಂದು ತಿಳಿಸಲಾಗಿದೆ.</p>.<p>ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ ಬಿಲ್ ಪಾವತಿಯ ನೋಡಲ್ ಏಜೆನ್ಸಿಯಾಗಿದ್ದು, ಬಿಪಿಎಲ್, ಎಪಿಎಲ್, ವಲಸೆ ಕಾರ್ಮಿಕರು ಮತ್ತು ಪಡಿತರ ಚೀಟಿ ಇಲ್ಲದೆ ಇತರ ರಾಜ್ಯಗಳಿಂದ ಮರಳಿದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಟ್ರಸ್ಟ್ ವಹಿಸಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>