<p><strong>ಬೆಂಗಳೂರು</strong>: ಉಭಯ ಸದನಗಳು ಗದ್ದಲದಲ್ಲಿ ಮುಳುಗಿ ಹೋಗಿದ್ದ ಸಂದರ್ಭದಲ್ಲೇ, ಸಚಿವರು, ಶಾಸಕರ ಸಂಬಳ ಮತ್ತು ಭತ್ಯೆಗಳನ್ನು ದುಪ್ಪಟ್ಟು ಏರಿಕೆ ಮಾಡುವ ಎರಡು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆಯಿತು.</p>.<p>ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದವು. ‘ಸದನ ನಿಮ್ಮಪ್ಪನದ್ದಲ್ಲ’ ಎಂದು ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ ಎಂದು ಆಪಾದಿಸಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿದ್ದರು. ಈ ಸಮಯದಲ್ಲಿ ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ‘ ಮತ್ತು ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ’ಗಳನ್ನು ಯಾವುದೇ ಚರ್ಚೆ ಇಲ್ಲದೇ ಅನುಮೋದನೆ ಪಡೆಯಲಾಯಿತು.</p>.<p>ಮುಖ್ಯಮಂತ್ರಿಯವರ ವೇತನ ತಿಂಗಳಿಗೆ ₹75 ಸಾವಿರದಿಂದ ₹1.50 ಲಕ್ಷ, ವಿಧಾನಸಭಾಧ್ಯಕ್ಷರು ಮತ್ತು ಸಚಿವರ ವೇತನ ₹60 ಸಾವಿರದಿಂದ ₹1.25 ಲಕ್ಷ, ವಿಧಾನ ಪರಿಷತ್ ಸಭಾಪತಿ ವೇತನ ₹ 75 ಸಾವಿರದಿಂದ ₹ 1.25 ಲಕ್ಷ, ರಾಜ್ಯ ಸಚಿವರ ವೇತನ₹ 50 ಸಾವಿರದಿಂದ ₹ 75 ಸಾವಿರ ಹಾಗೂ ಶಾಸಕರ ವೇತನ ₹ 40 ಸಾವಿರದಿಂದ ₹ 80 ಸಾವಿರಕ್ಕೆ ಏರಿಕೆಯಾಗಲಿದೆ.</p>.<h2>ಭತ್ಯೆ ಹೆಚ್ಚಳ</h2><p>l→ಮುಖ್ಯಮಂತ್ರಿ,ಸಚಿವರು: ₹4.50 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ (ಆತಿಥ್ಯ ಭತ್ಯೆ)</p><p>l→ಸಚಿವರು: ₹1.20 ಲಕ್ಷದಿಂದ ₹2.50 ಲಕ್ಷಕ್ಕೆ ಏರಿಕೆ (ಮನೆ ಬಾಡಿಗೆ)</p><p>l→ರಾಜ್ಯಸಚಿವರು: ₹1.20 ಲಕ್ಷದಿಂದ ₹2 ಲಕ್ಷಕ್ಕೆ ಏರಿಕೆ (ಮನೆ ಬಾಡಿಗೆ)</p>.<p>ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿಧಾನಸಭಾಧ್ಯಕ್ಷರು, ಸಭಾಪತಿ, ವಿರೋಧ ಪಕ್ಷದ ನಾಯಕರು, ಮುಖ್ಯ ಸಚೇತಕರ ವೇತನ, ಭತ್ಯೆ ಹೆಚ್ಚಳದಿಂದ ₹ 50 ಕೋಟಿ, ಮುಖ್ಯಮಂತ್ರಿ, ಸಚಿವರುಗಳ ವೇತನ ಭತ್ಯೆ ಹೆಚ್ಚಳದಿಂದ ₹ 10 ಕೋಟಿ ಸೇರಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹ 62 ಕೋಟಿ ಹೆಚ್ಚುವರಿ ಹೊರೆ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಭಯ ಸದನಗಳು ಗದ್ದಲದಲ್ಲಿ ಮುಳುಗಿ ಹೋಗಿದ್ದ ಸಂದರ್ಭದಲ್ಲೇ, ಸಚಿವರು, ಶಾಸಕರ ಸಂಬಳ ಮತ್ತು ಭತ್ಯೆಗಳನ್ನು ದುಪ್ಪಟ್ಟು ಏರಿಕೆ ಮಾಡುವ ಎರಡು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆಯಿತು.</p>.<p>ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದವು. ‘ಸದನ ನಿಮ್ಮಪ್ಪನದ್ದಲ್ಲ’ ಎಂದು ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ ಎಂದು ಆಪಾದಿಸಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿದ್ದರು. ಈ ಸಮಯದಲ್ಲಿ ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ‘ ಮತ್ತು ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ’ಗಳನ್ನು ಯಾವುದೇ ಚರ್ಚೆ ಇಲ್ಲದೇ ಅನುಮೋದನೆ ಪಡೆಯಲಾಯಿತು.</p>.<p>ಮುಖ್ಯಮಂತ್ರಿಯವರ ವೇತನ ತಿಂಗಳಿಗೆ ₹75 ಸಾವಿರದಿಂದ ₹1.50 ಲಕ್ಷ, ವಿಧಾನಸಭಾಧ್ಯಕ್ಷರು ಮತ್ತು ಸಚಿವರ ವೇತನ ₹60 ಸಾವಿರದಿಂದ ₹1.25 ಲಕ್ಷ, ವಿಧಾನ ಪರಿಷತ್ ಸಭಾಪತಿ ವೇತನ ₹ 75 ಸಾವಿರದಿಂದ ₹ 1.25 ಲಕ್ಷ, ರಾಜ್ಯ ಸಚಿವರ ವೇತನ₹ 50 ಸಾವಿರದಿಂದ ₹ 75 ಸಾವಿರ ಹಾಗೂ ಶಾಸಕರ ವೇತನ ₹ 40 ಸಾವಿರದಿಂದ ₹ 80 ಸಾವಿರಕ್ಕೆ ಏರಿಕೆಯಾಗಲಿದೆ.</p>.<h2>ಭತ್ಯೆ ಹೆಚ್ಚಳ</h2><p>l→ಮುಖ್ಯಮಂತ್ರಿ,ಸಚಿವರು: ₹4.50 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ (ಆತಿಥ್ಯ ಭತ್ಯೆ)</p><p>l→ಸಚಿವರು: ₹1.20 ಲಕ್ಷದಿಂದ ₹2.50 ಲಕ್ಷಕ್ಕೆ ಏರಿಕೆ (ಮನೆ ಬಾಡಿಗೆ)</p><p>l→ರಾಜ್ಯಸಚಿವರು: ₹1.20 ಲಕ್ಷದಿಂದ ₹2 ಲಕ್ಷಕ್ಕೆ ಏರಿಕೆ (ಮನೆ ಬಾಡಿಗೆ)</p>.<p>ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿಧಾನಸಭಾಧ್ಯಕ್ಷರು, ಸಭಾಪತಿ, ವಿರೋಧ ಪಕ್ಷದ ನಾಯಕರು, ಮುಖ್ಯ ಸಚೇತಕರ ವೇತನ, ಭತ್ಯೆ ಹೆಚ್ಚಳದಿಂದ ₹ 50 ಕೋಟಿ, ಮುಖ್ಯಮಂತ್ರಿ, ಸಚಿವರುಗಳ ವೇತನ ಭತ್ಯೆ ಹೆಚ್ಚಳದಿಂದ ₹ 10 ಕೋಟಿ ಸೇರಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹ 62 ಕೋಟಿ ಹೆಚ್ಚುವರಿ ಹೊರೆ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>