ಗ್ಯಾರಂಟಿ ಯೋಜನೆಗಳ ಪರಿಶೀಲನೆ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡುವುದು, ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶ್ರಮಿಸುವುದು. ಕುಂದು–ಕೊರತೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಮಕ್ಕಳಿಗೆ ನೀಡುವ ಪೌಷ್ಟಿಕಾಂಶ ವಿತರಣೆಯ ನಿರ್ವಹಣೆ ಮಾಡುವುದು, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಜಲಮೂಲಗಳ ಜೀರ್ಣೋದ್ಧಾರ, ಬಿತ್ತನೆಬೀಜ, ಗೊಬ್ಬರ ವಿತರಣೆ, ಉದ್ಯೋಗ ಖಾತ್ರಿ ಕಾಮಗಾರಿ, ಪಿಂಚಣಿ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸುವುದು, ದೌರ್ಜನ್ಯ ಪ್ರಕರಣಗಳನ್ನು ತಡೆಯುವುದೂ ಸೇರಿದಂತೆ 13 ವಿಚಾರಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.