<p><strong>ಬೆಂಗಳೂರು: </strong>ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ ಪ್ರಕರಣದ ಹಿಂದಿನ ‘ಷಡ್ಯಂತ್ರ’ ಬಯಲಿಗೆಳೆಯಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸಿದೆ.</p>.<p>‘ಸಿ.ಡಿ ಪ್ರಕರಣದ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು ಎಂಬ ಬಗ್ಗೆ ಕೂಲಂಕಷ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>‘ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದಿದ್ದು, ಅದರಲ್ಲಿ ಅವರ ವಿರುದ್ಧ ಇದೇ 2 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ತಿಳಿಸಿದ್ದಾರೆ. ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಆದೇಶಿಸಲಾಗಿದೆ’ ಎಂದಿದ್ದಾರೆ.</p>.<p>ಈ ಕುರಿತು ತನಿಖೆ ನಡೆಸಬೇಕು ಎಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು.</p>.<p class="Subhead"><strong>ವಿದೇಶಿ ಸಂಸ್ಥೆಯಿಂದ ತನಿಖೆ?: </strong>‘ಪ್ರಕರಣದ ಬಗ್ಗೆ ಜಾರಕಿಹೊಳಿ ಕುಟುಂಬ, ವಿದೇಶಿ ಗೂಢಚಾರ ಸಂಸ್ಥೆ ಮೂಲಕ ಸ್ವತಂತ್ರ ತನಿಖೆ ನಡೆಸುತ್ತಿದೆ. ಡಿಜಿಟಲ್ ಮತ್ತು ಸೈಬರ್ ರಹಸ್ಯಗಳನ್ನು ಬಯಲಿಗೆಳೆಯುವಲ್ಲಿ ಪರಿಣಿತವಾಗಿರುವ ಸಂಸ್ಥೆ<br />ಯ ಮೂಲಕ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಸಾಕ್ಷ್ಯ ಸಂಗ್ರಹವಾದ ಬಳಿಕ ನಿರ್ದಿಷ್ಟ ವ್ಯಕ್ತಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಲು ರಮೇಶ ನಿರ್ಧರಿಸಿದ್ದಾರೆ’ ಎಂದು ಜಾರಕಿಹೊಳಿ ಆಪ್ತ ಮೂಲಗಳು ಹೇಳಿವೆ.</p>.<p><strong>ಸಿ.ಡಿ ನಕಲಿ ಆಗಿದ್ದರೆ ತನಿಖೆ ಏಕೆ?</strong><br />‘ಅವರು( ರಮೇಶ ಜಾರಕಿಹೊಳಿ) ನಕಲಿ ಸಿ.ಡಿ ಎನ್ನುತ್ತಿದ್ದಾರೆ. ನಕಲಿ ಆಗಿದ್ದರೆ ತನಿಖೆ ಏಕೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.</p>.<p>‘ನೀವು ಸರಿ ಇದ್ದರೆ ನಿಮ್ಮನ್ನು ಯಾಕೆ ಸಿಕ್ಕಿಸುತ್ತಾರೆ. ಶರ್ಟ್, ಪ್ಯಾಂಟ್ ಬಿಚ್ಚಿ ಎಂದು ಕಾಂಗ್ರೆಸ್ನವರು ಹೇಳಿದ್ದರಾ? ಯಡಿಯೂರಪ್ಪ ಭ್ರಷ್ಟಚಾರಿ ಎಂದು ವಿಡಿಯೊದಲ್ಲಿ ಹೇಳಿರುವ ಅವರು, ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ’ ಎಂದಿದ್ದಾರೆ.</p>.<p><strong>ಅಪ್ಪ–ಮಗನ ಸಿ.ಡಿಗಳೂ ಬರಲಿವೆ</strong><br />‘ಎರಡೂ ಪಕ್ಷದ ನಾಯಕರು ಸೇರಿ ರಮೇಶ ಜಾರಕಿಹೊಳಿ ಸಿ.ಡಿ ಬಿಡುಗಡೆ ಮಾಡಿದ್ದಾರೆ. ಅವರು ಸುಮ್ಮನಿರುವುದಿಲ್ಲ. ರಾಜ್ಯದ ಆಡಳಿತ ನಡೆಸುತ್ತಿರುವ ಅಪ್ಪ–ಮಗ ಸೇರಿದಂತೆ 23 ನಾಯಕರ ಸಿ.ಡಿಗಳೂ ಹೊರ ಬರಲಿವೆ’ ಎಂದು ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ಎಲ್ಲ ಸಿ.ಡಿಗಳನ್ನೂ ರಮೇಶ ಅವರೇ ಬಿಡುಗಡೆ ಮಾಡಬಹುದು. ಸತ್ಯ ಯಾವತ್ತಿದ್ದರೂ ಹೊರಗೆ ಬರಲೇಬೇಕಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ ಪ್ರಕರಣದ ಹಿಂದಿನ ‘ಷಡ್ಯಂತ್ರ’ ಬಯಲಿಗೆಳೆಯಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸಿದೆ.</p>.<p>‘ಸಿ.ಡಿ ಪ್ರಕರಣದ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು ಎಂಬ ಬಗ್ಗೆ ಕೂಲಂಕಷ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>‘ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದಿದ್ದು, ಅದರಲ್ಲಿ ಅವರ ವಿರುದ್ಧ ಇದೇ 2 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ತಿಳಿಸಿದ್ದಾರೆ. ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಆದೇಶಿಸಲಾಗಿದೆ’ ಎಂದಿದ್ದಾರೆ.</p>.<p>ಈ ಕುರಿತು ತನಿಖೆ ನಡೆಸಬೇಕು ಎಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು.</p>.<p class="Subhead"><strong>ವಿದೇಶಿ ಸಂಸ್ಥೆಯಿಂದ ತನಿಖೆ?: </strong>‘ಪ್ರಕರಣದ ಬಗ್ಗೆ ಜಾರಕಿಹೊಳಿ ಕುಟುಂಬ, ವಿದೇಶಿ ಗೂಢಚಾರ ಸಂಸ್ಥೆ ಮೂಲಕ ಸ್ವತಂತ್ರ ತನಿಖೆ ನಡೆಸುತ್ತಿದೆ. ಡಿಜಿಟಲ್ ಮತ್ತು ಸೈಬರ್ ರಹಸ್ಯಗಳನ್ನು ಬಯಲಿಗೆಳೆಯುವಲ್ಲಿ ಪರಿಣಿತವಾಗಿರುವ ಸಂಸ್ಥೆ<br />ಯ ಮೂಲಕ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಸಾಕ್ಷ್ಯ ಸಂಗ್ರಹವಾದ ಬಳಿಕ ನಿರ್ದಿಷ್ಟ ವ್ಯಕ್ತಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಲು ರಮೇಶ ನಿರ್ಧರಿಸಿದ್ದಾರೆ’ ಎಂದು ಜಾರಕಿಹೊಳಿ ಆಪ್ತ ಮೂಲಗಳು ಹೇಳಿವೆ.</p>.<p><strong>ಸಿ.ಡಿ ನಕಲಿ ಆಗಿದ್ದರೆ ತನಿಖೆ ಏಕೆ?</strong><br />‘ಅವರು( ರಮೇಶ ಜಾರಕಿಹೊಳಿ) ನಕಲಿ ಸಿ.ಡಿ ಎನ್ನುತ್ತಿದ್ದಾರೆ. ನಕಲಿ ಆಗಿದ್ದರೆ ತನಿಖೆ ಏಕೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.</p>.<p>‘ನೀವು ಸರಿ ಇದ್ದರೆ ನಿಮ್ಮನ್ನು ಯಾಕೆ ಸಿಕ್ಕಿಸುತ್ತಾರೆ. ಶರ್ಟ್, ಪ್ಯಾಂಟ್ ಬಿಚ್ಚಿ ಎಂದು ಕಾಂಗ್ರೆಸ್ನವರು ಹೇಳಿದ್ದರಾ? ಯಡಿಯೂರಪ್ಪ ಭ್ರಷ್ಟಚಾರಿ ಎಂದು ವಿಡಿಯೊದಲ್ಲಿ ಹೇಳಿರುವ ಅವರು, ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ’ ಎಂದಿದ್ದಾರೆ.</p>.<p><strong>ಅಪ್ಪ–ಮಗನ ಸಿ.ಡಿಗಳೂ ಬರಲಿವೆ</strong><br />‘ಎರಡೂ ಪಕ್ಷದ ನಾಯಕರು ಸೇರಿ ರಮೇಶ ಜಾರಕಿಹೊಳಿ ಸಿ.ಡಿ ಬಿಡುಗಡೆ ಮಾಡಿದ್ದಾರೆ. ಅವರು ಸುಮ್ಮನಿರುವುದಿಲ್ಲ. ರಾಜ್ಯದ ಆಡಳಿತ ನಡೆಸುತ್ತಿರುವ ಅಪ್ಪ–ಮಗ ಸೇರಿದಂತೆ 23 ನಾಯಕರ ಸಿ.ಡಿಗಳೂ ಹೊರ ಬರಲಿವೆ’ ಎಂದು ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ಎಲ್ಲ ಸಿ.ಡಿಗಳನ್ನೂ ರಮೇಶ ಅವರೇ ಬಿಡುಗಡೆ ಮಾಡಬಹುದು. ಸತ್ಯ ಯಾವತ್ತಿದ್ದರೂ ಹೊರಗೆ ಬರಲೇಬೇಕಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>