<p><strong>ಬೆಂಗಳೂರು</strong>: 'ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದವಿದೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.ಬೆಂಗಳೂರು: ರೇರಾ ವ್ಯಾಪ್ತಿಗೆ ಕೆಂಪೇಗೌಡ ಬಡಾವಣೆ .<p>ವಿಧಾನಸಭೆಯಲ್ಲಿ ಬಿಜೆಪಿಯ ಪ್ರಭು ಚೌವ್ಹಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 'ಕಳೆದ 70 ವರ್ಷಗಳಿಂದ ಎಲ್ಲ ಸರ್ಕಾರಗಳೂ ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ ಜನಪರ ಯೋಜನೆಗಳಿಗೆ ಮಂಜೂರು ಮಾಡಿದ್ದು, ಪ್ರಸ್ತುತ ಸ್ಮಶಾನಕ್ಕೂ ಭೂಮಿ ಇಲ್ಲದಂತಾಗಿದೆ' ಎಂದರು.</p><p>'ಕಳೆದ 10 ವರ್ಷಗಳಿಂದ ಎಲ್ಲ ಸರ್ಕಾರಗಳೂ ವಸತಿ ಪ್ರದೇಶಗಳಿಗೆ ಅವಶ್ಯ ಇರುವಷ್ಟು ಸ್ಮಶಾನ ಭೂಮಿ ನೀಡಲು ಪ್ರಯತ್ನಿಸಿದೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ಸರ್ಕಾರದ ಬೆನ್ನುಹತ್ತಿದೆ. ಸರ್ಕಾರಿ ಜಮೀನು ಇದ್ದಲ್ಲಿ ಆ ಭೂಮಿಯನ್ನೇ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಸರ್ಕಾರಿ ಜಮೀನು ಇಲ್ಲದಿದ್ದ ಭಾಗಗಳಲ್ಲಿ ಸ್ಮಶಾನ ಭೂಮಿ ನೀಡುವ ಸಲುವಾಗಿ ಕಳೆದ 3 ವರ್ಷದಲ್ಲಿ ₹ 58 ಕೋಟಿ ಕೊಟ್ಟು ಭೂಮಿಯನ್ನು ಖರೀದಿ ಮಾಡುವ ಹಂತಕ್ಕೆ ಬಂದು ನಿಂತಿದ್ದೇವೆ' ಎಂದು ವಿಷಾದಿಸಿದರು.</p>.ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?.<p>ಪ್ರಭು ಚೌವ್ಹಾಣ್ ಪ್ರತಿನಿಧಿಸುವ ಔರಾದ್ ತಾಲ್ಲೂಕಿನ ಪರಿಸ್ಥಿತಿ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡಿದ ಅವರು, :ಔರಾದ್ ತಾಲೂಕಿನ 154 ವಸತಿ ಪ್ರದೇಶಗಳ ಪೈಕಿ 9 ಪ್ರದೇಶಗಳಲ್ಲಿ ಸ್ಮಶಾನ ಇಲ್ಲ ಎಂಬ ವರದಿ ಇದೆ. ಈ 9 ಗ್ರಾಮಗಳ ಪೈಕಿ 2 ಗ್ರಾಮಗಳಿಗೆ ಆ ಗ್ರಾಮದ ಮಿತಿಯಲ್ಲೇ ಸರ್ಕಾರಿ ಭೂಮಿ ಲಭ್ಯ ಇದ್ದು, ಇನ್ನೂ ಒಂದು ವಾರದಲ್ಲಿ ಸ್ಮಶಾನ ಭೂಮಿಗೆ ಕಾಯ್ದಿರಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಇನ್ನೂ 7 ವಸತಿ ಪ್ರದೇಶಗಳಿಗೆ ಪಕ್ಕದ ಗ್ರಾಮದಲ್ಲಿ ಭೂಮಿ ಇದ್ದು, ಅದನ್ನು 15 ದಿನಗಳ ಒಳಗೆ ಕಾಯ್ದಿರಿಸಲು ಸೂಚಿಸಲಾಗಿದೆ' ಎಂದರು.</p><p>'ಒಂದು ವೇಳೆ ಆ ಜಾಗ ಸೂಕ್ತ ಅಲ್ಲ ಅಂತ ಗೊತ್ತಾದರೆ ಖಾಸಗಿ ಜಮೀನನ್ನು ಖರೀದಿಸಲು ಸಹ ಪ್ರಸ್ತಾವನೆ ಸಿದ್ದವಾಗಿದೆ. ಖಾಸಗಿ ಜಮೀನುಗಳಿಗೆ ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಅಧಿಕ ಹಣ ನೀಡಲೂ ಸರ್ಕಾರ ಮುಂದಾಗಿದೆ. ಇನ್ನೂ ಕಾಂಪೌಂಡ್ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನೂ ನರೇಗಾ ಅಡಿಯಲ್ಲಿ ಗ್ರಾಮ ಪಂಚಾಯತ್ ಮಾಡಿಕೊಡುತ್ತಾರೆ. ಈ ಸಂಬಂಧ ಗ್ರಾಮ ಪಂಚಾಯತ್ ಸಿಇಒ ಹಾಗೂ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು' ಎಂದರು.</p>.ಚಿಕ್ಕಮಗಳೂರು: ನಕಲಿ ದಾಖಲೆ ಸೃಜಿಸಿ 450 ಎಕರೆ ಸರ್ಕಾರಿ ಭೂಮಿ ಕಬಳಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದವಿದೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.ಬೆಂಗಳೂರು: ರೇರಾ ವ್ಯಾಪ್ತಿಗೆ ಕೆಂಪೇಗೌಡ ಬಡಾವಣೆ .<p>ವಿಧಾನಸಭೆಯಲ್ಲಿ ಬಿಜೆಪಿಯ ಪ್ರಭು ಚೌವ್ಹಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 'ಕಳೆದ 70 ವರ್ಷಗಳಿಂದ ಎಲ್ಲ ಸರ್ಕಾರಗಳೂ ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ ಜನಪರ ಯೋಜನೆಗಳಿಗೆ ಮಂಜೂರು ಮಾಡಿದ್ದು, ಪ್ರಸ್ತುತ ಸ್ಮಶಾನಕ್ಕೂ ಭೂಮಿ ಇಲ್ಲದಂತಾಗಿದೆ' ಎಂದರು.</p><p>'ಕಳೆದ 10 ವರ್ಷಗಳಿಂದ ಎಲ್ಲ ಸರ್ಕಾರಗಳೂ ವಸತಿ ಪ್ರದೇಶಗಳಿಗೆ ಅವಶ್ಯ ಇರುವಷ್ಟು ಸ್ಮಶಾನ ಭೂಮಿ ನೀಡಲು ಪ್ರಯತ್ನಿಸಿದೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ಸರ್ಕಾರದ ಬೆನ್ನುಹತ್ತಿದೆ. ಸರ್ಕಾರಿ ಜಮೀನು ಇದ್ದಲ್ಲಿ ಆ ಭೂಮಿಯನ್ನೇ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಸರ್ಕಾರಿ ಜಮೀನು ಇಲ್ಲದಿದ್ದ ಭಾಗಗಳಲ್ಲಿ ಸ್ಮಶಾನ ಭೂಮಿ ನೀಡುವ ಸಲುವಾಗಿ ಕಳೆದ 3 ವರ್ಷದಲ್ಲಿ ₹ 58 ಕೋಟಿ ಕೊಟ್ಟು ಭೂಮಿಯನ್ನು ಖರೀದಿ ಮಾಡುವ ಹಂತಕ್ಕೆ ಬಂದು ನಿಂತಿದ್ದೇವೆ' ಎಂದು ವಿಷಾದಿಸಿದರು.</p>.ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?.<p>ಪ್ರಭು ಚೌವ್ಹಾಣ್ ಪ್ರತಿನಿಧಿಸುವ ಔರಾದ್ ತಾಲ್ಲೂಕಿನ ಪರಿಸ್ಥಿತಿ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡಿದ ಅವರು, :ಔರಾದ್ ತಾಲೂಕಿನ 154 ವಸತಿ ಪ್ರದೇಶಗಳ ಪೈಕಿ 9 ಪ್ರದೇಶಗಳಲ್ಲಿ ಸ್ಮಶಾನ ಇಲ್ಲ ಎಂಬ ವರದಿ ಇದೆ. ಈ 9 ಗ್ರಾಮಗಳ ಪೈಕಿ 2 ಗ್ರಾಮಗಳಿಗೆ ಆ ಗ್ರಾಮದ ಮಿತಿಯಲ್ಲೇ ಸರ್ಕಾರಿ ಭೂಮಿ ಲಭ್ಯ ಇದ್ದು, ಇನ್ನೂ ಒಂದು ವಾರದಲ್ಲಿ ಸ್ಮಶಾನ ಭೂಮಿಗೆ ಕಾಯ್ದಿರಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಇನ್ನೂ 7 ವಸತಿ ಪ್ರದೇಶಗಳಿಗೆ ಪಕ್ಕದ ಗ್ರಾಮದಲ್ಲಿ ಭೂಮಿ ಇದ್ದು, ಅದನ್ನು 15 ದಿನಗಳ ಒಳಗೆ ಕಾಯ್ದಿರಿಸಲು ಸೂಚಿಸಲಾಗಿದೆ' ಎಂದರು.</p><p>'ಒಂದು ವೇಳೆ ಆ ಜಾಗ ಸೂಕ್ತ ಅಲ್ಲ ಅಂತ ಗೊತ್ತಾದರೆ ಖಾಸಗಿ ಜಮೀನನ್ನು ಖರೀದಿಸಲು ಸಹ ಪ್ರಸ್ತಾವನೆ ಸಿದ್ದವಾಗಿದೆ. ಖಾಸಗಿ ಜಮೀನುಗಳಿಗೆ ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಅಧಿಕ ಹಣ ನೀಡಲೂ ಸರ್ಕಾರ ಮುಂದಾಗಿದೆ. ಇನ್ನೂ ಕಾಂಪೌಂಡ್ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನೂ ನರೇಗಾ ಅಡಿಯಲ್ಲಿ ಗ್ರಾಮ ಪಂಚಾಯತ್ ಮಾಡಿಕೊಡುತ್ತಾರೆ. ಈ ಸಂಬಂಧ ಗ್ರಾಮ ಪಂಚಾಯತ್ ಸಿಇಒ ಹಾಗೂ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು' ಎಂದರು.</p>.ಚಿಕ್ಕಮಗಳೂರು: ನಕಲಿ ದಾಖಲೆ ಸೃಜಿಸಿ 450 ಎಕರೆ ಸರ್ಕಾರಿ ಭೂಮಿ ಕಬಳಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>