<p><strong>ಬೆಂಗಳೂರು:</strong> ಗಂಗಾವತಿ ತಾಲ್ಲೂಕಿನ ಆನೆಗೊಂದಿ ಬಳಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಎಸಗಿದ ಪ್ರಕರಣದ ಬೆನ್ನಲ್ಲೇ ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ಪ್ರವಾಸಿಗರ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲು ಸರ್ಕಾರ ಮುಂದಾಗಿದೆ. </p>.<p>ಗೃಹ ಇಲಾಖೆಯು ಈ ಸಂಬಂಧ ಕೆಲವು ನಿರ್ದೇಶನಗಳನ್ನು ಹೊರಡಿಸಿದೆ. ಅವುಗಳನ್ನು ಉಲ್ಲಂಘಿಸಿದರೆ ರೆಸಾರ್ಟ್ ಮತ್ತು ಹೋಂಸ್ಟೇ ಮಾಲೀಕರನ್ನೇ ಹೊಣೆ ಮಾಡಲಾಗುವುದು. ಪ್ರವಾಸಿಗರಿಗೆ ಅಪಾಯವಾದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.</p>.<p>ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಜಿಲ್ಲಾ ಎಸ್ಪಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಗೃಹ ಇಲಾಖೆ ನಿರ್ದೇಶನ ನೀಡಿದೆ.</p>.<p>‘ಇದರಲ್ಲಿ ಉಲ್ಲೇಖಿಸಿರುವ ನಿರ್ದೇಶನಗಳ ಪಾಲನೆ ಬಗ್ಗೆ ಎಲ್ಲ ರೆಸಾರ್ಟ್ ಮತ್ತು ಹೋಂಸ್ಟೇಗಳ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು. ಅವರ ಪ್ರವಾಸಿ/ವೀಕ್ಷಣಾ ಕಾರ್ಯಕ್ರಮಗಳನ್ನು ಪರಿಶೀಲಿಸಿ, ಅವುಗಳಲ್ಲಿ ಅಪಾಯದ ಸಾಧ್ಯತೆಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಸೂಚಿಸಿದೆ.</p>.<p>‘ತಕ್ಷಣದಿಂದಲೇ ಈ ಪ್ರಕ್ರಿಯೆಯನ್ನು ಪ್ರಾರಂಭಿಸಿ, ಒಂದು ವಾರದಲ್ಲಿ ಪೂರ್ಣಗೊಳಿಸಬೇಕು. ಇದೇ 18ರ ಒಳಗೆ ವರದಿ ನೀಡಬೇಕು’ ಎಂದು ಸೂಚಿಸಿದೆ.</p>.<p><strong>ನಿರ್ದೇಶನಗಳು</strong></p><p>* ವಿದೇಶಿ ಪ್ರವಾಸಿಗರೂ ಒಳಗೊಂಡು ಎಲ್ಲರ ರಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳಬೇಕು</p><p>* ರೆಸಾರ್ಟ್ ಅಥವಾ ಹೋಂಸ್ಟೇ ಆವರಣದ ಹೊರವಲಯ ಮತ್ತು ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುನ್ನ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅನುಮತಿ ಪಡೆದುಕೊಳ್ಳಬೇಕು</p><p>* ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿ ಪಡೆಯದೆ ನಿರ್ಜನ ಪ್ರದೇಶ/ಹೊರವಲಯ/ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯಬಾರದು</p><p>* ಅನುಮತಿ ಪಡೆಯದೇ ಕರೆದೊಯ್ದ ಸಂದರ್ಭದಲ್ಲಿ ಕಾಡುಪ್ರಾಣಿಗಳಿಂದ ಅಥವಾ ದುಷ್ಕರ್ಮಿಗಳಿಂದ ಅಪಾಯ ಎದುರಾದಲ್ಲಿ ಮಾಲೀಕರೇ ಜವಾಬ್ದಾರರು. ಇದು ಶಿಕ್ಷಾರ್ಹ ಅಪರಾಧ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಂಗಾವತಿ ತಾಲ್ಲೂಕಿನ ಆನೆಗೊಂದಿ ಬಳಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಎಸಗಿದ ಪ್ರಕರಣದ ಬೆನ್ನಲ್ಲೇ ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ಪ್ರವಾಸಿಗರ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲು ಸರ್ಕಾರ ಮುಂದಾಗಿದೆ. </p>.<p>ಗೃಹ ಇಲಾಖೆಯು ಈ ಸಂಬಂಧ ಕೆಲವು ನಿರ್ದೇಶನಗಳನ್ನು ಹೊರಡಿಸಿದೆ. ಅವುಗಳನ್ನು ಉಲ್ಲಂಘಿಸಿದರೆ ರೆಸಾರ್ಟ್ ಮತ್ತು ಹೋಂಸ್ಟೇ ಮಾಲೀಕರನ್ನೇ ಹೊಣೆ ಮಾಡಲಾಗುವುದು. ಪ್ರವಾಸಿಗರಿಗೆ ಅಪಾಯವಾದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.</p>.<p>ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಜಿಲ್ಲಾ ಎಸ್ಪಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಗೃಹ ಇಲಾಖೆ ನಿರ್ದೇಶನ ನೀಡಿದೆ.</p>.<p>‘ಇದರಲ್ಲಿ ಉಲ್ಲೇಖಿಸಿರುವ ನಿರ್ದೇಶನಗಳ ಪಾಲನೆ ಬಗ್ಗೆ ಎಲ್ಲ ರೆಸಾರ್ಟ್ ಮತ್ತು ಹೋಂಸ್ಟೇಗಳ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು. ಅವರ ಪ್ರವಾಸಿ/ವೀಕ್ಷಣಾ ಕಾರ್ಯಕ್ರಮಗಳನ್ನು ಪರಿಶೀಲಿಸಿ, ಅವುಗಳಲ್ಲಿ ಅಪಾಯದ ಸಾಧ್ಯತೆಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಸೂಚಿಸಿದೆ.</p>.<p>‘ತಕ್ಷಣದಿಂದಲೇ ಈ ಪ್ರಕ್ರಿಯೆಯನ್ನು ಪ್ರಾರಂಭಿಸಿ, ಒಂದು ವಾರದಲ್ಲಿ ಪೂರ್ಣಗೊಳಿಸಬೇಕು. ಇದೇ 18ರ ಒಳಗೆ ವರದಿ ನೀಡಬೇಕು’ ಎಂದು ಸೂಚಿಸಿದೆ.</p>.<p><strong>ನಿರ್ದೇಶನಗಳು</strong></p><p>* ವಿದೇಶಿ ಪ್ರವಾಸಿಗರೂ ಒಳಗೊಂಡು ಎಲ್ಲರ ರಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳಬೇಕು</p><p>* ರೆಸಾರ್ಟ್ ಅಥವಾ ಹೋಂಸ್ಟೇ ಆವರಣದ ಹೊರವಲಯ ಮತ್ತು ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುನ್ನ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅನುಮತಿ ಪಡೆದುಕೊಳ್ಳಬೇಕು</p><p>* ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿ ಪಡೆಯದೆ ನಿರ್ಜನ ಪ್ರದೇಶ/ಹೊರವಲಯ/ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯಬಾರದು</p><p>* ಅನುಮತಿ ಪಡೆಯದೇ ಕರೆದೊಯ್ದ ಸಂದರ್ಭದಲ್ಲಿ ಕಾಡುಪ್ರಾಣಿಗಳಿಂದ ಅಥವಾ ದುಷ್ಕರ್ಮಿಗಳಿಂದ ಅಪಾಯ ಎದುರಾದಲ್ಲಿ ಮಾಲೀಕರೇ ಜವಾಬ್ದಾರರು. ಇದು ಶಿಕ್ಷಾರ್ಹ ಅಪರಾಧ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>