<p><strong>ಬೆಂಗಳೂರು</strong>: ‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ ₹50ರಂತೆ ಆರ್ಥಿಕ ನೆರವು ನೀಡಲು ₹300 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>. <p>ವಿಧಾನಸೌಧದಲ್ಲಿ ನ.8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ಮೇಲೆ ₹100 ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿತ್ತು. ಈ ಮೊತ್ತದಲ್ಲಿ ತಲಾ ₹50ರಂತೆ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ಬಿಡುಗಡೆ ಮಾಡಿದೆ’ ಎಂದು ಸಚಿವರು ಹೇಳಿದ್ದಾರೆ.</p>. <p>‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಕಬ್ಬು ಬೆಳೆಗಾರರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿ ಟನ್ಗೆ ₹50 ರಂತೆ ಜಮಾ ಮಾಡಲು ಜಿಲ್ಲಾಧಿಕಾರಿ ಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><blockquote>ಕಬ್ಬು ನುರಿಸುವಿಕೆ ಮಾರ್ಚ್ ಮೊದಲ ವಾರದ ವೇಳೆಗೆ ಅಂತ್ಯವಾಗಲಿದ್ದು, 600 ಲಕ್ಷ ಟನ್ ನುರಿಸುವ ಅಂದಾಜು ಆಧರಿಸಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆ </blockquote><span class="attribution">ಶಿವಾನಂದ ಪಾಟೀಲ,ಕಬ್ಬು ಅಭಿವೃದ್ಧಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ ₹50ರಂತೆ ಆರ್ಥಿಕ ನೆರವು ನೀಡಲು ₹300 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>. <p>ವಿಧಾನಸೌಧದಲ್ಲಿ ನ.8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ಮೇಲೆ ₹100 ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿತ್ತು. ಈ ಮೊತ್ತದಲ್ಲಿ ತಲಾ ₹50ರಂತೆ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ಬಿಡುಗಡೆ ಮಾಡಿದೆ’ ಎಂದು ಸಚಿವರು ಹೇಳಿದ್ದಾರೆ.</p>. <p>‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಕಬ್ಬು ಬೆಳೆಗಾರರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿ ಟನ್ಗೆ ₹50 ರಂತೆ ಜಮಾ ಮಾಡಲು ಜಿಲ್ಲಾಧಿಕಾರಿ ಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><blockquote>ಕಬ್ಬು ನುರಿಸುವಿಕೆ ಮಾರ್ಚ್ ಮೊದಲ ವಾರದ ವೇಳೆಗೆ ಅಂತ್ಯವಾಗಲಿದ್ದು, 600 ಲಕ್ಷ ಟನ್ ನುರಿಸುವ ಅಂದಾಜು ಆಧರಿಸಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆ </blockquote><span class="attribution">ಶಿವಾನಂದ ಪಾಟೀಲ,ಕಬ್ಬು ಅಭಿವೃದ್ಧಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>