ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ₹25 ಲಕ್ಷ ಬಿಡುಗಡೆ ಮಾಡಲು ಸಿಎಂ ಆದೇಶ

Last Updated 20 ಫೆಬ್ರುವರಿ 2020, 12:52 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕಳೆದ ವರ್ಷ ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಮಂಡ್ಯ ಮೂಲದ ಸಿಆರ್‌ಪಿಎಫ್‌ ಯೋಧ ಎಚ್‌. ಗುರು ಅವರಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹25 ಲಕ್ಷ ಬಿಡುಗಡೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆಗೆ ಇಂದು ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು, ‘ಯೋಧ ಎಚ್‌. ಗುರು ಅವರ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ₹25 ಲಕ್ಷ ಅನುದಾನವನ್ನು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು,’ ಎಂದು ಸಿಎಂ ಸೂಚಿಸಿದ್ದಾರೆ.

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT