ಆರ್ಥಿಕ ಇಲಾಖೆಗೆ ಇಂದು ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ‘ಯೋಧ ಎಚ್. ಗುರು ಅವರ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ₹25 ಲಕ್ಷ ಅನುದಾನವನ್ನು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು,’ ಎಂದು ಸಿಎಂ ಸೂಚಿಸಿದ್ದಾರೆ.