<p><strong>ಬೆಂಗಳೂರು</strong>: ಶಾಸಕರು ಕೇಳಿದ ಪ್ರಶ್ನೆಗಳಿಗೆ ಉತ್ತರವನ್ನು ವಿಧಾನಮಂಡಲಕ್ಕೆ ಸಕಾಲದಲ್ಲಿ ಕಳುಹಿಸದೇ ಇರುವ ಇಲಾಖೆಗಳ ಕಾರ್ಯದರ್ಶಿಗಳಿಂದ ತಕ್ಷಣ ವಿವರಣೆ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೆ, ಆರು ಕಾರ್ಯದರ್ಶಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.</p>.<p>ಇಲಾಖೆಯ ವತಿಯಿಂದ ಉತ್ತರಿಸಬೇಕಾದ ಪ್ರಶ್ನೆಗಳಿಗೆ ಉತ್ತರವನ್ನು ಸಕಾಲದಲ್ಲಿ ವಿಧಾನಮಂಡಲಕ್ಕೆ ಕಳುಹಿಸದೇ ಇರುವ ಕುರಿತು ಲಿಖಿತ ಸಮಜಾಯಿಷಿ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p>ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ವಸತಿ ಇಲಾಖೆ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ಆರ್. ವಿನೋತ್ ಪ್ರಿಯ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಆರ್.ಗಿರೀಶ್, ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ.</p>.<p>ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಬರೆದಿದ್ದ ಪತ್ರದಲ್ಲಿದ್ದ ಅಂಶಗಳನ್ನು ಮುಖ್ಯ ಕಾರ್ಯದರ್ಶಿ ತಮ್ಮ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಮಾರ್ಚ್ 16ರಂದು ವಿಧಾನಸಭೆಯಲ್ಲಿ 245 ಪ್ರಶ್ನೆಗಳ ಪೈಕಿ 90ಕ್ಕೆ ಮಾತ್ರ ಉತ್ತರ ಒದಗಿಸಲಾಗಿದೆ. ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರಗಳನ್ನು ಕಳುಹಿಸದೇ ಇರುವುದರಿಂದ ವಿಧಾನಸಭಾ ಸದಸ್ಯರು ಸದನದಲ್ಲಿ ಚರ್ಚಿಸಲು ಅಡಚಣೆಯಾಗಿದೆ. ಇದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡುವುದರ ಜೊತೆಗೆ, ಶಾಸಕರು ಹಕ್ಕಿಗೆ ಮತ್ತು ಸದನದ ಘನತೆಗೆ ಚ್ಯುತಿ ಉಂಟು ಮಾಡಿದೆ. ಮುಖ್ಯಮಂತ್ರಿಯ ಜೊತೆ ನಡೆದ ಸಭೆಯಲ್ಲಿ ಸಭಾಧ್ಯಕ್ಷರು ಈ ಬಗ್ಗೆ ತೀವು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಉಳಿಕೆ ಉತ್ತರಗಳನ್ನು ವಿಧಾನಸಭೆಯ ಕಾರ್ಯದರ್ಶಿಗೆ ತಕ್ಷಣ ನೀಡಬೇಕು. ಉತ್ತರ ಕಳುಹಿಸಲು ಸಾಧ್ಯವಾಗದ ಸಂದರ್ಭದಲ್ಲಿ, ಸಂಬಂಧಪಟ್ಟ ಶಾಸಕರಿಗೆ ತಮ್ಮ ಇಲಾಖೆಯ ಸಚಿವರಿಂದ ವಿಳಂಬಕ್ಕೆ ಸಕಾರಣಗಳನ್ನು ನೀಡಿ ಪ್ರತ್ಯೇಕ ಪತ್ರ ನೀಡಬೇಕು. ಜೊತೆಗೆ ಮಾಹಿತಿ ಒದಗಿಸುವ ನಿರ್ದಿಷ್ಟ ಸಮಯದ ಬಗ್ಗೆಯೂ ತಿಳಿಸಬೇಕು’ ಎಂದು ಸೂಚಿಸಿದ್ದಾರೆ.</p>.<p><strong>ಅಶೋಕ ಭೇಟಿ ಮಾಡಿದ ಅಧಿಕಾರಿಗಳು: </strong>ಸುಮಾರು 10 ರಿಂದ 12 ಐಎಎಸ್ ಅಧಿಕಾರಿಗಳು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಭೇಟಿ ಚರ್ಚೆ ನಡೆಸಿದರು. ತಮ್ಮಲ್ಲಿ ಯಾರೂ ಕಚೇರಿ ಕೆಲಸ ಬಿಟ್ಟು ಗಾಲ್ಫ್ ಆಡಲು ಹೊರಗೆ ಹೋಗುತ್ತಿಲ್ಲ ಎಂದು ಹೇಳಿದರು.</p><p>ಮುಂಬರುವ ದಿನಗಳಲ್ಲಿ ಸಾಧ್ಯವಷ್ಟು ಹೆಚ್ಚು ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ ಎಂಬ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.</p><p>‘ನಾನು ಕೆಲವು ಅಧಿಕಾರಿಗಳು ಹೋಗುತ್ತಾರೆ ಎಂದಿದ್ದೇನೆ. ಎಲ್ಲರನ್ನೂ ಉದ್ದೇಶಿಸಿ ಹೇಳಿಲ್ಲ. ಉತ್ತಮವಾಗಿ ಕೆಲಸ ಮಾಡುವವರೂ ಇದ್ದಾರೆ. ಎಲ್ಲರೂ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆಂದು’ ಮೂಲಗಳು ಹೇಳಿವೆ.</p>.<h2>ಅಧಿಕಾರಿಗಳ ಅಮಾನತಿಗೆ ಸಿ.ಎಂ ಸೂಚನೆ: ಪರಮೇಶ್ವರ</h2><p>‘ಸದಸ್ಯರು ಕೇಳಿರುವ ಎಲ್ಲ ಪ್ರಶ್ನೆಗಳಿಗೆ ಅಧಿವೇಶನ ಮುಗಿಯುವುದರ ಒಳಗೆ ಉತ್ತರ ನೀಡಲಾಗುವುದು. ಉತ್ತರ ಕೊಡುವಲ್ಲಿ ಲೋಪ ಎಸಗಿದ ಕಾರ್ಯದರ್ಶಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಯವರು ಈಗಾಗಲೇ ಸೂಚನೆ ನೀಡಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನ ಪರಿಷತ್ನಲ್ಲಿ ತಿಳಿಸಿದರು.</p><p>‘ಸದಸ್ಯರು ಒಟ್ಟು 688 ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ, ಇದುವರೆಗೆ 400 ಪ್ರಶ್ನೆಗಳಿಗೆ ಉತ್ತರವೇ ಬಂದಿಲ್ಲ. ಇವುಗಳಿಗೆ ಎಳ್ಳು–ನೀರು ಬಿಡುತ್ತೀರಾ?’ ಎಂದು ಜೆಡಿಎಸ್ನ ಎಸ್.ಎಲ್.ಭೋಜೆಗೌಡ ಅವರು ಬುಧವಾರ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ವಿಧಾನ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಆಗಿದೆ. ಸಿದ್ದರಾಮಯ್ಯ ಅವರು ಸಭೆ ನಡೆಸಿ ಉತ್ತರ ಕೊಡಿಸಲು ಕ್ರಮಕ್ಕೆ ಸೂಚಿಸಿದ್ದಾರೆ. ಮುಂದಿನ ವಾರದ ವೇಳೆಗೆ ಪರಿಸ್ಥಿತಿ ಸುಧಾರಿಸಲಿದೆ ಎಂದು ಭರವಸೆ ನೀಡಿದರು.</p><p>ಆಗ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಭರವಸೆ ನೀಡಿದರೆ ಸಾಲದು. ಕಾರ್ಯರೂಪಕ್ಕೆ ಬರಬೇಕು. ಇದೇ 25ರ ಒಳಗೆ ಸದಸ್ಯರ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಇಲ್ಲದಿದ್ದರೆ, 26ಕ್ಕೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ’ ಎಂದು ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಸಕರು ಕೇಳಿದ ಪ್ರಶ್ನೆಗಳಿಗೆ ಉತ್ತರವನ್ನು ವಿಧಾನಮಂಡಲಕ್ಕೆ ಸಕಾಲದಲ್ಲಿ ಕಳುಹಿಸದೇ ಇರುವ ಇಲಾಖೆಗಳ ಕಾರ್ಯದರ್ಶಿಗಳಿಂದ ತಕ್ಷಣ ವಿವರಣೆ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೆ, ಆರು ಕಾರ್ಯದರ್ಶಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.</p>.<p>ಇಲಾಖೆಯ ವತಿಯಿಂದ ಉತ್ತರಿಸಬೇಕಾದ ಪ್ರಶ್ನೆಗಳಿಗೆ ಉತ್ತರವನ್ನು ಸಕಾಲದಲ್ಲಿ ವಿಧಾನಮಂಡಲಕ್ಕೆ ಕಳುಹಿಸದೇ ಇರುವ ಕುರಿತು ಲಿಖಿತ ಸಮಜಾಯಿಷಿ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p>ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ವಸತಿ ಇಲಾಖೆ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ಆರ್. ವಿನೋತ್ ಪ್ರಿಯ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಆರ್.ಗಿರೀಶ್, ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ.</p>.<p>ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಬರೆದಿದ್ದ ಪತ್ರದಲ್ಲಿದ್ದ ಅಂಶಗಳನ್ನು ಮುಖ್ಯ ಕಾರ್ಯದರ್ಶಿ ತಮ್ಮ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಮಾರ್ಚ್ 16ರಂದು ವಿಧಾನಸಭೆಯಲ್ಲಿ 245 ಪ್ರಶ್ನೆಗಳ ಪೈಕಿ 90ಕ್ಕೆ ಮಾತ್ರ ಉತ್ತರ ಒದಗಿಸಲಾಗಿದೆ. ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರಗಳನ್ನು ಕಳುಹಿಸದೇ ಇರುವುದರಿಂದ ವಿಧಾನಸಭಾ ಸದಸ್ಯರು ಸದನದಲ್ಲಿ ಚರ್ಚಿಸಲು ಅಡಚಣೆಯಾಗಿದೆ. ಇದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡುವುದರ ಜೊತೆಗೆ, ಶಾಸಕರು ಹಕ್ಕಿಗೆ ಮತ್ತು ಸದನದ ಘನತೆಗೆ ಚ್ಯುತಿ ಉಂಟು ಮಾಡಿದೆ. ಮುಖ್ಯಮಂತ್ರಿಯ ಜೊತೆ ನಡೆದ ಸಭೆಯಲ್ಲಿ ಸಭಾಧ್ಯಕ್ಷರು ಈ ಬಗ್ಗೆ ತೀವು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಉಳಿಕೆ ಉತ್ತರಗಳನ್ನು ವಿಧಾನಸಭೆಯ ಕಾರ್ಯದರ್ಶಿಗೆ ತಕ್ಷಣ ನೀಡಬೇಕು. ಉತ್ತರ ಕಳುಹಿಸಲು ಸಾಧ್ಯವಾಗದ ಸಂದರ್ಭದಲ್ಲಿ, ಸಂಬಂಧಪಟ್ಟ ಶಾಸಕರಿಗೆ ತಮ್ಮ ಇಲಾಖೆಯ ಸಚಿವರಿಂದ ವಿಳಂಬಕ್ಕೆ ಸಕಾರಣಗಳನ್ನು ನೀಡಿ ಪ್ರತ್ಯೇಕ ಪತ್ರ ನೀಡಬೇಕು. ಜೊತೆಗೆ ಮಾಹಿತಿ ಒದಗಿಸುವ ನಿರ್ದಿಷ್ಟ ಸಮಯದ ಬಗ್ಗೆಯೂ ತಿಳಿಸಬೇಕು’ ಎಂದು ಸೂಚಿಸಿದ್ದಾರೆ.</p>.<p><strong>ಅಶೋಕ ಭೇಟಿ ಮಾಡಿದ ಅಧಿಕಾರಿಗಳು: </strong>ಸುಮಾರು 10 ರಿಂದ 12 ಐಎಎಸ್ ಅಧಿಕಾರಿಗಳು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಭೇಟಿ ಚರ್ಚೆ ನಡೆಸಿದರು. ತಮ್ಮಲ್ಲಿ ಯಾರೂ ಕಚೇರಿ ಕೆಲಸ ಬಿಟ್ಟು ಗಾಲ್ಫ್ ಆಡಲು ಹೊರಗೆ ಹೋಗುತ್ತಿಲ್ಲ ಎಂದು ಹೇಳಿದರು.</p><p>ಮುಂಬರುವ ದಿನಗಳಲ್ಲಿ ಸಾಧ್ಯವಷ್ಟು ಹೆಚ್ಚು ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ ಎಂಬ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.</p><p>‘ನಾನು ಕೆಲವು ಅಧಿಕಾರಿಗಳು ಹೋಗುತ್ತಾರೆ ಎಂದಿದ್ದೇನೆ. ಎಲ್ಲರನ್ನೂ ಉದ್ದೇಶಿಸಿ ಹೇಳಿಲ್ಲ. ಉತ್ತಮವಾಗಿ ಕೆಲಸ ಮಾಡುವವರೂ ಇದ್ದಾರೆ. ಎಲ್ಲರೂ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆಂದು’ ಮೂಲಗಳು ಹೇಳಿವೆ.</p>.<h2>ಅಧಿಕಾರಿಗಳ ಅಮಾನತಿಗೆ ಸಿ.ಎಂ ಸೂಚನೆ: ಪರಮೇಶ್ವರ</h2><p>‘ಸದಸ್ಯರು ಕೇಳಿರುವ ಎಲ್ಲ ಪ್ರಶ್ನೆಗಳಿಗೆ ಅಧಿವೇಶನ ಮುಗಿಯುವುದರ ಒಳಗೆ ಉತ್ತರ ನೀಡಲಾಗುವುದು. ಉತ್ತರ ಕೊಡುವಲ್ಲಿ ಲೋಪ ಎಸಗಿದ ಕಾರ್ಯದರ್ಶಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಯವರು ಈಗಾಗಲೇ ಸೂಚನೆ ನೀಡಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನ ಪರಿಷತ್ನಲ್ಲಿ ತಿಳಿಸಿದರು.</p><p>‘ಸದಸ್ಯರು ಒಟ್ಟು 688 ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ, ಇದುವರೆಗೆ 400 ಪ್ರಶ್ನೆಗಳಿಗೆ ಉತ್ತರವೇ ಬಂದಿಲ್ಲ. ಇವುಗಳಿಗೆ ಎಳ್ಳು–ನೀರು ಬಿಡುತ್ತೀರಾ?’ ಎಂದು ಜೆಡಿಎಸ್ನ ಎಸ್.ಎಲ್.ಭೋಜೆಗೌಡ ಅವರು ಬುಧವಾರ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ವಿಧಾನ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಆಗಿದೆ. ಸಿದ್ದರಾಮಯ್ಯ ಅವರು ಸಭೆ ನಡೆಸಿ ಉತ್ತರ ಕೊಡಿಸಲು ಕ್ರಮಕ್ಕೆ ಸೂಚಿಸಿದ್ದಾರೆ. ಮುಂದಿನ ವಾರದ ವೇಳೆಗೆ ಪರಿಸ್ಥಿತಿ ಸುಧಾರಿಸಲಿದೆ ಎಂದು ಭರವಸೆ ನೀಡಿದರು.</p><p>ಆಗ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಭರವಸೆ ನೀಡಿದರೆ ಸಾಲದು. ಕಾರ್ಯರೂಪಕ್ಕೆ ಬರಬೇಕು. ಇದೇ 25ರ ಒಳಗೆ ಸದಸ್ಯರ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಇಲ್ಲದಿದ್ದರೆ, 26ಕ್ಕೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ’ ಎಂದು ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>