‘ಕಾರ್ಖಾನೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ರಾಜ್ಯ ಸರ್ಕಾರವು 2019, 2020 ಹಾಗೂ 2021ರಲ್ಲಿ ಪತ್ರ ಬರೆದು ಒತ್ತಾಯಿಸಿತ್ತು. ಆದರೆ, ಕಾರ್ಖಾನೆಯನ್ನು ಬಂದ್ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದರ ಬದಲು ಉಕ್ಕು ಪ್ರಾಧಿಕಾರವು ಕಾರ್ಖಾನೆಗೆ ಹೆಚ್ಚಿನ ಬಂಡವಾಳ ಹೂಡಬೇಕು. ಅಗತ್ಯವಿದ್ದರೆ, ಖಾಸಗಿಯವರಿಗೆ ವಹಿಸಲು ಮತ್ತೊಮ್ಮೆ ಬಿಡ್ ಕರೆಯಬೇಕು’ ಎಂದು ರಾಜ್ಯ ಸರ್ಕಾರವು ಪತ್ರದಲ್ಲಿ ತಿಳಿಸಿದೆ.